Tel: 7676775624 | Mail: info@yellowandred.in

Language: EN KAN

    Follow us :


ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Posted date: 22 May, 2020

Powered by:     Yellow and Red

ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ರಾಮನಗರ:ಮೇ/೨೨/೨೦/ಶುಕ್ರವಾರ. ಸ್ನಾತಕೋತ್ತರ (ವಾರ್ಷಿಕ/ಸೆಮಿಸ್ಟರ್) ಪದವಿಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಡ್, ಎಂ.ಲಿಬ್.ಐ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪಡೆದು ಅನುತ್ತೀರ್ಣರಾಗಿರುವ ಇಲ್ಲವೇ ಪರೀಕ್ಷೆ ತೆಗೆದುಕೊಂಡಿಲ್ಲದ ವಿದ್ಯಾರ್ಥಿಗಳ ಕೋರಿಕೆಯಂತೆ ಒಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ನಿಗದಿಪಡಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಅಧಿಸೂಚನೆ ಹೊರಡಿಸಿದೆ.


೨೦೦೧/೦೨ ರಿಂದ ೨೦೧೦/೧೧ ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಪದವಿಗಳಾದ ಬಿ.ಎ/ಬಿ.ಕಾಂ ೨೦೦೧/೦೨ ರಿಂದ ೨೦೧೨/೧೩ ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಲಿಬ್.ಐ.ಎ.ಸ್ಸಿ., ಬಿ.ಎಡ್., ಬಿ.ಎಡ್.,(ವಿಶೇಷ), ಸ್ನಾತಕೋತ್ತರ ಡಿಪ್ಲೋಮಾ, ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳು ಮತ್ತು ೨೦೦೧/೦೨ ರಿಂದ ೨೦೧೨/೧೩ ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದಾಗಿ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ ಶುಲ್ಕವಿಲ್ಲದೆ ದಿನಾಂಕ: ೩೦-೦೬-೨೦೨೦ ಕಡೆಯ ದಿನವಾಗಿರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ವಿಜಯ್ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ಞsoumಥಿsuಡಿu.ಚಿಛಿ.iಟಿ ವೀಕ್ಷಿಸುವುದು ಅಥವಾ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳು, ಬಿ.ಎಂ. ರಸ್ತೆ, ರಾಮನಗರ ದೂ.ಸಂಖ್ಯೆ: 8088090431, 8861732487, 8660460261 ಅಥವಾ 9743184848ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑