Tel: 7676775624 | Mail: info@yellowandred.in

Language: EN KAN

    Follow us :


ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು : ಇಕ್ರಂ

Posted date: 27 May, 2020

Powered by:     Yellow and Red

ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು : ಇಕ್ರಂ

ರಾಮನಗರ:ಮೇ/೨೭/೨೦/ಬುಧವಾರ. ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ‌ ಉಲ್ಲಾ ಷರೀಫ್ ಅವರು ತಿಳಿಸಿದರು.


ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಮನಗರ ಜಿಲ್ಲೆಯ ಇರುಳಿಗ ಸಮುದಾಯದ ಸ್ಥಿತಿಗತಿ ಹಾಗೂ ಅವರಿಗೆ ದೊರೆಯಬೇಕಿರುವ ಸವಲತ್ತುಗಳ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.


ಜಿಲ್ಲೆಯಲ್ಲಿನ ಇರುಳಿಗ ಸಮುದಾಯದ ಜನರು ಮೊದಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಇರುಳಿಗ ಸಮುದಾಯದಲ್ಲಿನ ವಿದ್ಯಾವಂತರು ತಮ್ಮ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರದ ವತಿಯಿಂದ ಅನುಷ್ಠಾನಗೊಂಡಿರುವ ಯೋಜನೆಗಳು ಅವರಿಗೆ ತಲಪುವಂತೆ ಮಾಡಬೇಕುಎಂದು ತಿಳಿಸಿದರು.


ಸಮಾಜಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಜೊತೆಗೂಡಿ ಇರುಳಿಗ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು. ಇರುಳಿಗ ಸಮುದಾಯದವರು ವಾಸಿಸುವ ಸ್ಥಳಗಳಿಗೆ ತೆರಳಿ ಅವರಿಗೆ ಅಗತ್ಯವಾಗಿರುವ ಸವಲತ್ತುಗಳನ್ನು ತಲುಪಿಸಬೇಕು ಎಂದು ತಿಳಿಸಿದರು.


ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ ಮಾತನಾಡಿ ರಾಮನಗರ ಜಿಲ್ಲೆಯ ೧೧೨ ಹಳ್ಳಿಗಳಲ್ಲಿ ಇರುಳಿಗ ಸಮುದಾಯದವರು ವಾಸಿಸುತ್ತಿದ್ದಾರೆ. ಶೇ ೮೫ ರಷ್ಟು ಇರುಳಿಗ ಸಮುದಾಯದವರು ಈಗಲೂ ದುಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು, ಇಲ್ಲವೆ ಸೌದೆ ಕಡಿದು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ ಎಂದರು.


ಇರುಳಿಗ ಸಮುದಾಯದ ಜನರು ಈಗಲೂ ವಲಸೆ ಹೋಗುತ್ತಿದ್ದಾರೆ. ಅವರು ಒಂದು ಕಡೆ ನೆಲೆ ನಿಂತರೆ ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈಚೆಗೆ ಇರುಳಿಗ ಸಮದಾಯದಲ್ಲಿಯೂ ಪದವಿಗಳನ್ನು ಪಡೆದವರಿದ್ದಾರೆ. ಆದರೆ ಅವರಿಗೆ ಮಾಹಿತಿ ಕೊರತೆಯಿಂದ ಉದ್ಯೋಗಗಳು ಸಿಗುತ್ತಿಲ್ಲ. ಅವರಿಗೆ ಸರ್ಕಾರ ಸವಲತ್ತುಗಳನ್ನು ನೀಡುವ ಜೊತೆಗೆ ಅವರಿಗೆ ಸ್ವಯಂ ಉದ್ಯೋಗ ತರಬೇತಿಯನ್ನು ನೀಡಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.


ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನಾಗರಾಜು, ಇರುಳಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಗೌರವಾಧ್ಯಕ್ಷ ಮಹದೇವಯ್ಯ, ವನವಾಸಿ ಕಲ್ಯಾಣ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಎಸ್. ರಾಜು, ಖಜಾಂಚಿ ಆರ್.ಕೆ. ಸತೀಶ್, ಇರುಳಿಗ ಸಮುದಾಯದ ಮುಖಂಡರಾದ ಡಾ.ಕೆ.ವಿ. ಕೃಷ್ಣಮೂರ್ತಿ, ವೆಂಕಟರಾಮಯ್ಯ, ಮದ್ದೂರಯ್ಯ, ಮಹದೇವಯ್ಯ, ಶಿವರಾಜ್, ಶಿವಣ್ಣ, ವೆಂಕಟೇಶ್, ಮಹದೇವಯ್ಯ, ಯಲ್ಲೊ ಅಂಡ್ ರೆಡ್ ಫೌಂಡೇಷನ್ ಸಂಸ್ಥೆಯ ಅಮಿತ್‌ರಾಜ್, ಶಿವ, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑