Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

Posted date: 29 Jun, 2020

Powered by:     Yellow and Red

ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಜೂ/೨೯/೨೦/ಸೋಮವಾರ. ಜಿಲ್ಲೆಯಲ್ಲಿ ಇಂದು ಯಾವುದೇ ಕೊರೋನಾ ಸೋಂಕಿತರ (ಕೊವಿಡ್-19) ಪ್ರಕರಣ ಹೊಸದಾಗಿ ವರದಿಯಾಗಿರುವುದಿಲ್ಲ, ಹಾಗೂ ೨೭ ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಮಾಹಿತಿ ನೀಡಿದ್ದಾರೆ.


ಇದುವರೆಗೆ ಜಿಲ್ಲೆಯಲ್ಲಿ ೧೫೦ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೫೫, ಮಾಗಡಿ ೩೯, ಚನ್ನಪಟ್ಟಣ ೩೦ ಮತ್ತು ರಾಮನಗರದ ೨೬ ಪ್ರಕರಣಗಳು ಸೇರಿವೆ.


ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು ೧೫೦ ಪ್ರಕರಣಗಳ ಪೈಕಿ ೭೧ ಮಂದಿ ಗುಣಮುಖರಾಗಿದ್ದಾರೆ. ೭೪ ಪ್ರಕರಣಗಳು ಸಕ್ರಿಯವಾಗಿವೆ. ಚನ್ನಪಟ್ಟಣದ ೧೧, ಮಾಗಡಿಯ ೨೫, ರಾಮನಗರದ ೧೫, ಕನಕಪುರದ ೨೩ ಮಂದಿ ಸೇರಿ ೭೪ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.


*27 ಮಂದಿ ಬಿಡುಗಡೆ*:

ಜಿಲ್ಲಾ ಕೋವಿಡ್-೧೯ ಆಸ್ಪತ್ರೆಯಿಂದ ಇಂದು ಕನಕಪುರದ ೨೬ ಹಾಗೂ ರಾಮನಗರದಲ್ಲಿ ಒಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಚನ್ನಪಟ್ಟಣದ ೧೯, ಮಾಗಡಿಯ ೧೦, ರಾಮನಗರದ ೧೦, ಕನಕಪುರದ ೩೨ ಮಂದಿ ಸೇರಿ  ೭೧ ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೫ ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.


*ಜಿಲ್ಲಾ ಆರೋಗ್ಯ ಇಲಾಖೆ ವರದಿ:*

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಸೋಮವಾರ (ಜೂನ್ ೨೯) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೮,೬೭೯ (ಹೊಸದಾಗಿ ಇಂದಿನ ೧೫೯ ಸೇರಿ). ಇಂದು ಹೊಸದಾಗಿ ೪೧೩ ಜನ ೧೪ ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ಇಂಥವರ ಸಂಖ್ಯೆ ಜಿಲ್ಲೆಯಲ್ಲಿ ೨,೮೨೬ ಕ್ಕೆ ಏರಿಕೆಗೊಂಡಿದೆ. ೧೪೮ ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ ೨,೧೧೫ ಇಳಿಕೆಯಾಗಿದೆ.


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೩೯ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೨,೮೨೨ ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. 


ಒಟ್ಟು ೪ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೧೦ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೪೧೧ ಕ್ಕೆ ಏರಿಕೆಯಾಗಿದೆ.


ಇಂದು ಹೊಸದಾಗಿ ೧೬೮ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೮,೯೯೭ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೩೬ ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ ೧೬೮ ಬಾಕಿ ವರದಿ ಸೇರಿ ಒಟ್ಟು ೧,೪೮೨ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑