Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಇಂದು ಎರಡು ಪ್ರಕರಣ ವರದಿ ಜಿಲ್ಲಾಧಿಕಾರಿ

Posted date: 04 Jul, 2020

Powered by:     Yellow and Red

ಕೊರೋನಾ: ಜಿಲ್ಲೆಯಲ್ಲಿ ಇಂದು ಎರಡು ಪ್ರಕರಣ ವರದಿ ಜಿಲ್ಲಾಧಿಕಾರಿ

ರಾಮನಗರ:ಜು/೦೪/೨೦/ಶನಿವಾರ. ಜಿಲ್ಲೆಯಲ್ಲಿ ಇಂದು ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ರಾಮನಗರ ತಾಲ್ಲೂಕಿನಲ್ಲಿ ವರದಿಯಾಗಿದೆ. ಇವರನ್ನು ರಾಮನಗರದ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


ಇಂದು ೨೮ ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೧೫ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ.


ಇದುವರೆಗೆ ಜಿಲ್ಲೆಯಲ್ಲಿ ೨೨೭ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೬೨, ಮಾಗಡಿ ೮೩, ಚನ್ನಪಟ್ಟಣ ೪೦ ಮತ್ತು ರಾಮನಗರದ ೪೨ ಪ್ರಕರಣಗಳು ಸೇರಿವೆ.


ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.


*ಜಿಲ್ಲಾ ಆರೋಗ್ಯ ಇಲಾಖೆ ವರದಿ:*

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶನಿವಾರ (ಜುಲೈ ೪) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೯,೭೬೯ (ಹೊಸದಾಗಿ ಇಂದಿನ ೨೮೫ ಸೇರಿ). ಒಟ್ಟು ೩,೦೪೬ ಜನ ೧೪ ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ೨೭೫ ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ ೨,೮೮೬ ಕ್ಕೆ ಏರಿಕೆಯಾಗಿದೆ.


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೩೯ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೨,೯೯೮ ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. ಒಟ್ಟು ೧೨ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೫ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೩೪೦ ಕ್ಕೆ ಇಳಿಕೆಯಾಗಿದೆ.


ಇಂದು ಹೊಸದಾಗಿ ೨೮೫ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೧೦,೦೮೭ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೭೧೬ ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ ೨೮೫ ಬಾಕಿ ವರದಿ ಸೇರಿ ಒಟ್ಟು ೧,೭೪೧ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑