ಪೋಲಿಸರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧ ವಿತರಣೆ
ಕೋವಿಡ್ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಇದಕ್ಕಾಗಿ ಕೋವಿಡ್ ನಿಯಂತ್ರಣ ಮಾಡಲು ಹೋರಾಟ ನಡೆಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆಯುಷ್ ಇಲಾಖೆ ವತಿಯಿಂದ ಇಮ್ಯೂನ್ ಬೂಷ್ಟರ್ ವಿತರಿಸುವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆಯುಷ್ ಅಧಿಕಾರಿ ಡಾ. ರಾಜಲಕ್ಷ್ಮಿ ಅವರು ಚನ್ನಪಟ್ಟಣದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇಮ್ಯೂನ್ ಬೂಷ್ಟರ್ ಔಷಧಿ ವಿತರಿಸಿದರು.
ಕೋವಿಡ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಬೇಕು ಎಂದ ಅವರು ತರಬೇತಿ ಕೇಂದ್ರದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ತರಬೇತಿ ಕೇಂದ್ರದ ಅಧೀಕ್ಷಕರಾದ ಶೈಲೇಷ್,
ಆಯುಷ್ ಇಲಾಖೆಯ ಡಾ: ನೂರ್ ಆಯಿಷಾ, ಡಾ: ಚಂದ್ರಕಲಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು