Tel: 7676775624 | Mail: info@yellowandred.in

Language: EN KAN

    Follow us :


ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ. ತಹಶಿಲ್ದಾರ್ ಗೆ ಮನವಿ*

Posted date: 13 Jul, 2020

Powered by:     Yellow and Red

ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ. ತಹಶಿಲ್ದಾರ್ ಗೆ ಮನವಿ*

ಚನ್ನಪಟ್ಟಣ:ಜು/೧೩/೨೦/ಸೋಮವಾರ. ಇಂದು ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ನಂತರ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.


ತಾಲ್ಲೂಕು ಕಛೇರಿ ಹಾಗೂ ತಾಲ್ಲೂಕು ಪಂಚಾಯ್ತಿ ಕಛೇರಿ ಮುಂಭಾಗ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆ ಮುಂದು ಮಾಡಿ ಪ್ರತಿಭಟನೆ ನಡೆಸಿದರು.

ರಾಜ್ಯದಾದ್ಯಂತ ಅನಿರ್ಧಿಷ್ಟ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ವಿವಿಧ ಹಂತಗಳಲ್ಲಿ ತೀವ್ರ ಹೋರಾಟ ಮುಂದುವರಿಸುತ್ತಿದ್ದು, ಅವರು ಇಂದು ತಮ್ಮ ತಮ್ಮ ಗ್ರಾಮ ಪಂಚಾಯತಿ ಮುಂದೆ, ಆಯಾಯ ಪಂಚಾಯ್ತಿ ಅಡಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಅದೇ ಹಿನ್ನೆಲೆಯಲ್ಲಿ ಅವರು ನಗರಸಭಾ ವ್ಯಾಪ್ತಿಯಲ್ಲಿಯೂ ಸಹ ಪ್ರತಿಭಟನೆಯನ್ನು ನಡೆಸಿ, ತಮ್ಮ ಕೋರಿಕೆಯನ್ನು ಮಂಡಿಸಿದರು. ಕೊರೊನಾ ವಾರಿಯರ್ಸ್ ಗಳಾದ ನಮಗೆ ನ್ಯಾಯಯುತ ಬೇಡಿಕೆಗಳ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಸ್ಪಂದಿಸಿ, ನಮ್ಮ ಸೇವೆಯನ್ನು ನಾಡಿನ ಜನತೆಗೆ ಒದಗಿಸಬೇಕು. ನಾವು ಮುಕ್ತವಾಗಿ ಸೇವೆ ಸಲ್ಲಿಸಬೇಕಾದರೆ, ನಮ್ಮ ನ್ಯಾಯಯುತ ಬೇಡಿಕೆಗಳನ್ನು ಕಾರ್ಯಗತಗೊಳಿಸಬೇಕೆಂದು ಒತ್ತಾಯ ಮಾಡಿದರು.


ನಾಳೆಯಿಂದ ಜಿಲ್ಲಾ, ತಾಲ್ಲೂಕು ಪಟ್ಟಣ ಕೇಂದ್ರಗಳಲ್ಲಿ ಮಾನವ ಸರಪಳಿ ಮಾಡಿ ಪ್ರತಿಭಟನೆ ಮಾಡುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಠ  ಕಾಲ ವಿವಿಧ ಹಂತಗಳಲ್ಲಿ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು‌. ನಾವು ರಾಜ್ಯ ಸಂಘದ ಅಧ್ಯಕ್ಷರಾದ ಕೆ.ಎಸ್ ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿಗಳಾದ ಡಿ.ನಾಗಲಕ್ಷ್ಮಿ ಇವರ ಮಾರ್ಗದರ್ಶನದಲ್ಲಿ ಈ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑