Tel: 7676775624 | Mail: info@yellowandred.in

Language: EN KAN

    Follow us :


ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ತಾಲ್ಲೂಕು ಕಾಂಗ್ರೆಸ್ ಆರೋಪ

Posted date: 20 Aug, 2020

Powered by:     Yellow and Red

ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ತಾಲ್ಲೂಕು ಕಾಂಗ್ರೆಸ್ ಆರೋಪ

ಚನ್ನಪಟ್ಟಣ:ಆ/20/20/ಗುರುವಾರ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ, ಸುಳ್ಳನ್ನೇ ನೂರು ಬಾರಿ ಹೇಳಿ ಅದನ್ನೇ ನಿಜ ಎಂದು ನಂಬಿಸುವ ಮೂರ್ಖ ಸರ್ಕಾರ ಎಂದು ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ ಸಿ ವೀರೇಗೌಡ ಆರೋಪಿಸಿದರು. ಅವರು ಇಂದು ನಗರದ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿ ದಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡಿ, ನಂತರ ತಾಲ್ಲೂಕು ಕಛೇರಿಯ ಮುಂಭಾಗ ಜನಧ್ವನಿ ಎಂಬ ಹೆಸರಿನಡಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.


ಬಿಜೆಪಿ ಸರ್ಕಾರವು ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಈಗಾಗಲೇ ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೋವಿಡ್ ನೆವದಲ್ಲಿ ನೂರಾರು ಕೋಟಿ ಗುಳುಂ ಮಾಡಿದ್ದಾರೆ. ಭೂ ಕಾನೂನಿಗೆ ತಿದ್ದುಪಡಿ ತಂದು ರೈತರಿಗೆ ಅನ್ಯಾಯ ಎಸಗಿದ್ದಾರೆ. ಇದನ್ನೆಲ್ಲಾ ಗಮನಿಸಿರುವ ಮತದಾರರು 2023 ರಲ್ಲಿ ನಮ್ಮ ಕೈ ಹಿಡಿಯುತ್ತಾರೆ. ಅವರಿಗೆ ಧಂ ಇದ್ದರೆ ನಮ್ಮ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲಿ ಎಂದು ಸವಾಲು ಹಾಕಿದರು.


ಕಾಂಗ್ರೆಸ್ ಮುಖಂಡ ಶರತ್ ಚಂದ್ರ ಮಾತನಾಡಿ ಕಾಂಗ್ರೆಸ್ ನ ಅಂದಿನ ಜನಪ್ರಿಯ ಯೋಜನೆಗಳೆಲ್ಲವೂ ನಮ್ಮದು ಎಂದು ಬಿಂಬಿಸಿಕೊಂಡು ಬೀಗುತ್ತಿದ್ದಾರೆ. ಅವರಿಗೆ ಅನುಕೂಲವಾಗುವ ಯೋಜನೆಗಳನ್ನು ಮಾತ್ರ ತಂದು ಕೊಳ್ಳೆ ಹೊಡೆಯುತ್ತಿದ್ದಾರೆ. ಪ್ರಶ್ನೆ ಮಾಡುವ ವಿರೋಧ ಪಕ್ಷಗಳಿಗೆ ನೋಟೀಸ್ ನೀಡುವ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರದ ಆಡಳಿತವನ್ನು ಸಹಿಸಲಾಗುವುದಿಲ್ಲ ಎಂದು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.


ನಂತರ ಸರ್ಕಾರದ ವಿರುದ್ದ ಘೋಷಣೆ ಕೂಗಿ, ತಾಲ್ಲೂಕು ದಂಡಾಧಿಕಾರಿ ನಾಗೇಶ್ ರವರಿಗೆ ತಮ್ಮ ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು, ಪುಟ್ಟರಾಜು, ಕಾವೇರಮ್ಮ,  ಪ್ರಸನ್ನ, ಶೇಖರ್, ಕೋಕಿಲಾರಾಣಿ, ಕೆ ಟಿ ಲಕ್ಷ್ಮಮ್ಮ, ನಿಜಾಮ್ ಫೌಜದಾರ್, ಪಿ ಡಿ ರಾಜು, ಚೇತನ್ ಕೀಕರ್, ಅರುಣಕುಮಾರ್, ಶಾಂತಮ್ಮ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑