ನಾಗವಾರ ಗ್ರಾಮದ ದಲ್ಲಾಳಿ ಲಿಂಗಯ್ಯ ನಿಧನ
ಚನ್ನಪಟ್ಟಣ:ಆ/21/20/ಶುಕ್ರವಾರ. ತಾಲ್ಲೂಕಿನ ನಾಗವಾರ ಗ್ರಾಮದ ದಲ್ಲಾಳಿ ಲಿಂಗಯ್ಯ (82) ನವರು ಗುರುವಾರ ಸಂಜೆ ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿದ್ದಾರೆ.
ಮೃತರು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಪುಟ್ಟತಾಯಮ್ಮ, ಪುತ್ರ, ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಸಾವಿಗೆ ಗೋವಿಂದೇಗೌಡನದೊಡ್ಡಿ ಗ್ರಾಮದ ಲೇಟ್ ಚನ್ನಮ್ಮ ವೆಂಕಟೇಗೌಡರ ಕುಟುಂಬದವರು ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ 10:00 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು