ಸ್ವಾತಂತ್ರ್ಯ ದಿನಾಚರಣೆ, ಸೈನಿಕರು ಮತ್ತು ಯೋಗೇಶ್ವರ್ ಜನ್ಮ ದಿನದ ಹೆಸರಿನಲ್ಲಿ ಶನಿವಾರ ರಕ್ತದಾನ ಶಿಬಿರ
ಚನ್ನಪಟ್ಟಣ:ಆ/27/20/ಗುರುವಾರ. ಸ್ವಾತಂತ್ರ್ಯ ದಿನಾಚರಣೆ, ಹುತಾತ್ಮರ ದಿನಾಚರಣೆ ಹಾಗೂ ಮೇಲ್ಮನೆ ಸದಸ್ಯ ಸಿ ಪಿ ಯೋಗೇಶ್ವರ್ ಜನ್ಮ ದಿನದ ಪ್ರಯುಕ್ತ ನಗರದ ಎಲ್ ಎನ್ ಕಲ್ಯಾಣ ಮಂಟಪದಲ್ಲಿ, ಇದೇ ತಿಂಗಳ 29 ರ ಶನಿವಾರದಂದು ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ ಟಿ ಜಯರಾಮು ತಿಳಿಸಿದರು.
ಅವರು ಇಂದು ನಗರದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು.
74 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಮ್ಮ ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿರುವ ಹೆಮ್ಮೆಯ ಹುತಾತ್ಮ ಸೈನಿಕರ ಹೆಸರಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ಮಾತನಾಡಿ ಪ್ರತಿವರ್ಷವೂ ಆಗಸ್ಟ್ ತಿಂಗಳಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗುತ್ತದೆ. ಈಗಾಗಲೇ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಶಿಬಿರ ಯಶಸ್ಸಿಗೊಂಡಿದ್ದು, ನಮ್ಮ ತಾಲ್ಲೂಕಿನಲ್ಲಿ ಇದೇ 29 ರಂದು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಅಂದೇ ನಮ್ಮ ನಾಯಕರಾದ ಸಿ ಪಿ ಯೋಗೇಶ್ವರ್ ರವರ ಜನ್ಮ ದಿನವೂ ಇದ್ದು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ರಕ್ತದಾನ ಮಾಡುವ ಮೂಲಕ ದೇಶದ ವೀರರಿಗೆ ನೆರವಾಗಬೇಕೆಂದರು.
ನೂತನ ನಗರಾಧ್ಯಕ್ಷ ಶಿವಕುಮಾರ್ ಮಾತನಾಡಿ ನಮ್ಮೆಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿ ಶಿಬಿರವನ್ನು ಏರ್ಪಡಿಸಿದ್ದೇವೆ. ತಾಲ್ಲೂಕಿನ ಸಂಘಸಂಸ್ಥೆಗಳು, ಕಾರ್ಯಕರ್ತರು ಅಭಿಮಾನಿಗಳು ಬಂದು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲ್ಲೂಕು ಮಾಜಿ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಶಿವಲಿಂಗಯ್ಯ, ಪ್ರೇಮಕುಮಾರ್, ಚೇತನ್, ಪ್ರಕಾಶ್, ಜಯಪ್ರಕಾಶ್ ರಾಮಚಂದ್ರು, ಶಿವಕುಮಾರ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು