Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ಚನ್ನಪಟ್ಟಣದ 34 ಮಂದಿ ಸೇರಿದಂತೆ ಜಿಲ್ಲಾದ್ಯಂತ ಇಂದು 146 ಪ್ರಕರಣ ದೃಢ

Posted date: 14 Sep, 2020

Powered by:     Yellow and Red

ಕೊರೊನಾ: ಚನ್ನಪಟ್ಟಣದ 34 ಮಂದಿ ಸೇರಿದಂತೆ ಜಿಲ್ಲಾದ್ಯಂತ ಇಂದು 146 ಪ್ರಕರಣ ದೃಢ

ರಾಮನಗರ:ಸೆ/14/20/ಸೋಮವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 34, ಕನಕಪುರ 17, ಮಾಗಡಿ 32 ಮತ್ತು ರಾಮನಗರ 63 ಪ್ರಕರಣಗಳು ಸೇರಿ ಇಂದು ಒಟ್ಟು 146 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


 *ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 4,622 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1,094, ಕನಕಪುರ 942, ಮಾಗಡಿ 720 ಮತ್ತು ರಾಮನಗರ 1,866 ಪ್ರಕರಣಗಳು ಸೇರಿವೆ.


 *ಸಾವು* : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 14 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.


 *ಗುಣಮುಖ* : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 16, ಕನಕಪುರ ತಾಲ್ಲೂಕಿನಲ್ಲಿ 19, ಮಾಗಡಿ ತಾಲ್ಲೂಕಿನಲ್ಲಿ 23 ಹಾಗೂ ರಾಮನಗರ ತಾಲ್ಲೂಕಿನಲ್ಲಿ 38 ಜನ ಸೇರಿ ಒಟ್ಟಾರೆ 96 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,706 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 886, ಕನಕಪುರ 753, ಮಾಗಡಿ 490 ಮತ್ತು ರಾಮನಗರ 1,577 ಜನರು ಸೇರಿದ್ದಾರೆ.


 *ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 4,622 ಪ್ರಕರಣಗಳ ಪೈಕಿ 3,706 ಜನರು ಗುಣಮುಖರಾಗಿದ್ದಾರೆ, ಇನ್ನೂ 864 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 864 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 196, ಕನಕಪುರ 178, ಮಾಗಡಿ 216 ಮತ್ತು ರಾಮನಗರ 274 ಪ್ರಕರಣಗಳು ಸೇರಿವೆ.


 *ಜಿಲ್ಲಾ ಆರೋಗ್ಯ ಇಲಾಖೆ ವರದಿ* : ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಸೋಮವಾರ (ಸೆ. 14) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 39,291 (ಹೊಸದಾಗಿ ಇಂದಿನ 275 ಸೇರಿ).


 *ಜ್ವರ ತಪಾಸಣೆ* : ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 59 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 6,825 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.


 *ಮಾದರಿ ಸಂಗ್ರಹ:* ಇಂದು ಹೊಸದಾಗಿ 275 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 39,550 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 34,808 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 68 ಬಾಕಿ ವರದಿ ಸೇರಿ ಒಟ್ಟು 68 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑