ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಚನ್ನಪಟ್ಟಣ:ಸೆ/22/20/ಮಂಗಳವಾರ. ವಿದ್ಯುತ್ ತಂತಿ ಎಳೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ವಳಗೆರೆದೊಡ್ಡಿ ಗ್ರಾಮದ ಬಳಿ ನಡೆದಿದೆ.
ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಕಾರ್ಮಿಕ ಚಂದನ್ದಾಸ್ (22) ಎಂದು ಹೇಳಲಾಗಿದ್ದು ಪಶ್ಚಿಮ ಬಂಗಾಳ ಮೂಲದ ಮೂತಾಯ್ದಾಸ್ ಎಂಬುವರ ಪುತ್ರನಾದ ಈತ ಟೆಂಡರ್ ಮೂಲಕ ಐಪಿ ಲೈನ್ ನನ್ನು ಸಹಚರರ ಜೊತೆ ಎಳೆಯುವಾಗ ಈ ದುರ್ಘಟನೆ ಸಂಭವಿಸಿದೆ.
11 ಕೆವಿ ವಿದ್ಯುತ್ ಶಕ್ತಿ ಹೊಂದಿರುವ ವಿದ್ಯುತ್ ತಂತಿ ಈತನ ಮೇಲೆ ಬಿದ್ದ ಪರಿಣಾಮ ಆತನ ಬೆನ್ನಿನ ಮೇಲೆ ಬಾರಿ ಪ್ರಮಾಣದ ಗಾಯವಾಗಿ, ಸಾವು ಬದುಕಿನ ಜೊತೆ ಹೋರಾಟ ನಡೆಸುತ್ತಿದ್ದ ಈತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಮುನ್ನವೇ ಸಾವನ್ನಪ್ಪಿದ್ದಾನೆ.
ಈ ಪ್ರಕರಣದ ಬಗ್ಗೆ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಪಶ್ಚಿಮ ಬಂಗಾಳದಿಂದ ಸಂಬಂಧಿಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಸಂಬಂಧ 11 ಕೆವಿ ವಿದ್ಯುತ್ ತಂತಿ ಎಳೆಯಲು ಗುತ್ತಿಗೆ ಪಡೆದಿರುವ ಮಾಲೀಕರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು