ಹತ್ತನೇ ತರಗತಿಯ ಪೂರಕ ಪರೀಕ್ಷೆಯ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಕೊರೊನಾ ಜಾಗೃತಿ
ಚನ್ನಪಟ್ಟಣ:ಸೆ/23/20/ಬುಧವಾರ. ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹತ್ತನೇ ತರಗತಿಯ ಪೂರಕ ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಕೊರೊನಾ ಜಾಗೃತಿಯನ್ನು ಮೂಡಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನಾ ಸಂಸ್ಥೆಯ ಸ್ವಯಂ ಸೇವಕರು ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ, ಕೋವಿಡ್ ಪರೀಕ್ಷೆ ನಡೆಸಿ, ಸ್ಯಾನಿಟೈಸರ್ ನೀಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾಸ್ಕ್ ಧಾರಣೆ ಮಾಡಿಸಿ ಕೊಠಡಿಗೆ ಕಳುಹಿಸಿದ್ದಲ್ಲದೆ, ಪರೀಕ್ಷಾ ಹಾಲ್ ನಲ್ಲಿ ಸಹ ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಕುಳಿತುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಡೇನಿಯಲ್, ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗರಾಜು, ಶಿಕ್ಷಣ ಸಂಯೋಜಕರಾದ ಚಕ್ಕೆರೆ ಯೋಗೇಶ್, ದೈಹಿಕ ಶಿಕ್ಷಣ ಅಧಿಕಾರಿ ಶಿವಣ್ಣ, ಸಿಆರ್ ಪಿ ರಾಜು ಎಂ ಬಾಲಕರ ಪದವಿಪೂರ್ವ ಕಾಲೇಜಿನ ಅನಿಲ್ ಕುಮಾರ್ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ವಯಂಸೇವಕರಾದ ಶಾರದ ನಾಗೇಶ್ ಹಾಗೂ ಈರಾ ನಾಯಕ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು