ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ
ರಾಮನಗರ:ಸೆ/26/20/ಶನಿವಾರ. ರೈತ ಸಂಘದ ಹಲವು ಬಣಗಳು, ದಲಿತಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಸೇರಿದಂತೆ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಹತ್ತನೇ ತರಗತಿಯ ಪರೀಕ್ಷೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.
ವಿವಿಧ ರೈತ ಸಂಘಗಳು ಮತ್ತು ಇತರೆ ಸಂಘಟನೆಗಳು ದಿನಾಂಕ 28-09-2020 ರ ಸೋಮವಾರ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿರುವ ವಿಷಯ ಮಾಧ್ಯಮ ಗಳಲ್ಲಿ ಭಿತ್ತರವಾಗುತ್ತಿರುವ ಹಿನ್ನಲೆಯಲ್ಲಿ ದಿನಾಂಕ 28-09-2020 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ವಿಷಯದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳನ್ನು ದಿನಾಂಕ 29-09-2020 ರ ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು