ತಮ್ಮ ಜಾಗದಲ್ಲಿ ಕಾಂಪೌಂಡ್ ನಿರ್ಮಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ದೂರು ದಾಖಲು
ಚನ್ನಪಟ್ಟಣ:ಸೆ/28/20/ಸೋಮವಾರ. ತಮ್ಮ ಸ್ವಂತ ನಿವೇಶನದಲ್ಲಿ ಅನಧಿಕೃತವಾಗಿ ಕಾಂಪೌಂಡ್ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿದ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ತಮ್ಮ ನಿವೇಶನಕ್ಕೆ ಹೊಂದಿಕೊಂಡಂತೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದ ಸಂದರ್ಭದಲ್ಲಿ ತಡೆಯಲು ಹೋದ ಪತಿ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ನಗರದ ವಿವೇಕಾನಂದ ನಗರದ ಎರಡನೇ ಅಡ್ಡರಸ್ತೆಯಲ್ಲಿ ನಡೆದಿದೆ.
ಮಾರಣಾಂತಿಕವಾಗಿ ಗಾಯಗೊಂಡಿರುವವರು ಹನುಮಂತಯ್ಯ (೫೫) ಪತ್ನಿ ತಾಯಮ್ಮ (೫೦) ಎಂದು ಹೇಳಲಾಗಿದ್ದು, ವಿವಾದಿತ ಸ್ಥಳದಲ್ಲಿ ಮನೆ ನಿರ್ಮಾಣ ಮಾಡಿಕೊಂಡಿರುವ ಚಂದ್ರೇಗೌಡ ಹಾಗೂ ಇಬ್ಬರು ಗಂಡು ಮಕ್ಕಳು ಏಕಾಏಕಿ ಮನೆಗೆ ನುಗ್ಗಿ ಬಡಿಗೆಗಳಿಂದ ಹಲ್ಲೆ ನಡೆಸಿದರೆಂದು ಗಂಭೀರವಾಗಿ ಆರೋಪಿಸಲಾಗಿದೆ.
ಅವರ ಮನೆಯ ಸೀಮಿತ ಸ್ಥಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡದೆ ನಮ್ಮ ಮನೆಯ ಜಾಗದಲ್ಲಿ ಅತಿಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದನ್ನು ತಡೆದು ಪ್ರಶ್ನೆ ಮಾಡಿದಕ್ಕೆ ಮಕ್ಕಳು ಯಾರು ಇಲ್ಲದ ಸಂದರ್ಭದಲ್ಲಿ ರೌಡಿಗಳಂತೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಗಾಯಗೊಳಿಸಿ ಕ್ರೌರ್ಯ ಮೆರೆದಿದ್ದಾರೆಂದು ದೂರಿದ್ದಾರೆ.
ಲೇಟ್ ವೆಂಕಟದಾಸಯ್ಯ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಇವರ ಮಗನಾದ ಹನುಮಂತಯ್ಯ ಈಗಾಗಲೇ ನಿವೇಶನಗಳನ್ನು ಮಾರಾಟ ಮಾಡಲಾಗಿದ್ದು, ಆದರೆ ಸಂಬಂಧಿಸಿದ ಚಂದ್ರೇಗೌಡ ಅವರಿಗೆ ನೀಡಿದ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳದೆ ಬೇರೆ ನಿವೇಶನವಾದ ನಮ್ಮ ಮನೆಯ ಜಾಗಕ್ಕೆ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.
ವೃದ್ದರಾದ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡುವುದರ ಜೊತೆಯಲ್ಲಿ ಜಾತಿ ನಿಂದನೆ ಕೂಡ ಮಾಡಿದ್ದಾರೆಂದು ಗಂಭೀರವಾಗಿ ಆರೋಪಿಸಲಾಗಿದ್ದು, ಈ ಪ್ರಕರಣದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಾಯಗೊಂಡವರು ಸಾರ್ವಜನಿಕ ಆ ಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೋ ರಾ ಶ್ರೀನಿವಾಸ....
ಮೊ:9845856139.
ಪ್ರತಿಕ್ರಿಯೆಗಳು