Tel: 7676775624 | Mail: info@yellowandred.in

Language: EN KAN

    Follow us :


ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Posted date: 28 Sep, 2020

Powered by:     Yellow and Red

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ, ಇಂದು ಐಕ್ಯ ಹೋರಾಟ ಸಮಿತಿ ನೀಡಿದ ಕರ್ನಾಟಕ ಬಂದ್‌ಗೆ ರಾಮನಗರ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿತ್ತು. ಆದರೆ ರೇಷ್ಮೆಗೂಡು ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಿಸಿತು. ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಮುಚ್ಚಿದ್ದವು. ಹೋಟೆಲ್‌ಗಳು ತೆರೆದಿದ್ದವು.

ನಗರದಲ್ಲಿ ಜನರ ಓಡಾಟ ಎಂದಿನಂತೆ ಇತ್ತು. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಆದರೆ ಗ್ರಾಮೀಣ ಭಾಗದ ಸಾರಿಗೆ ಸಂಚಾರ ದಿನನಿತ್ಯದಂತೆ ಕಾರ್ಯನಿರ್ವಹಿಸುತ್ತಿದ್ದವು.  


ಒಟ್ಟಾರೆ ಜಿಲ್ಲಾ ಕೇಂದ್ರದಲ್ಲಿ ಜನಜೀವನಕ್ಕೆ ಯಾವುದೇ ತೊಂದರೆ ಆಗಲಿಲ್ಲ.

ರೈತ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಎಪಿಎಂಸಿ ವೃತ್ತದ ಬಳಿಯಿಂದ ಐಜೂರು ವೃತ್ತದವರೆಗೆ ಜಾಥಾ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು.


ನಂತರ ಐಜೂರು ವೃತ್ತ ದಲ್ಲಿ ಮಾನವ ಸರಪಳಿ ರಚಿಸಿ, ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು. ಸಂದರ್ಭದಲ್ಲಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯ ಪ್ರತಿಯನ್ನು ಸುಡುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.


ಸಿಟಿ ರೌಂಡ್ ಹಾಕಿದ ಪೋಲೀಸ್ ವರಿಷ್ಠಾಧಿಕಾರಿ ಗಿರೀಶ್ ರವರು

ಕರ್ನಾಟಕ್ ಬಂದ್ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದ್ದರು. ಜಿಲ್ಲೆಯ ಎಸ್ಪಿಯವರಾದ ಗಿರೀಶ್ ಅವರು ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭ ಟನೆ ಮಾಡಲು ಮಾತ್ರ ಅವಕಾಶ ನೀಡಿದ್ದರು.


ಪೊಲೀಸ್ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ ಎಸ್ಪಿ ಗಿರೀಶ್‌ರವರು ಇಂದು ಬೆಳ್ಳಂಬೆಳಿಗ್ಗೆಯೇ ನಗರ ಪ್ರದಕ್ಷಿಣೆ ನಡೆಸಿದರು. ರಾಮನಗರ ಬಸ್ ನಿಲ್ದಾಣದ ಬಳಿ, ಅವರು ಸಿಬ್ಬಂದಿ ಯಿಂದ ಮಾಹಿತಿ ಪಡೆದುಕೊಂಡರು. ಹಾಗೇ ಆಟೋ ಚಾಲಕರ ಬಳಿಯೂ ಮಾತುಕತೆ ನಡೆಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑