ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ
ಚನ್ನಪಟ್ಟಣ:ಸೆ/29/20/ಮಂಗಳವಾರ. ನಗರಸಭೆಯ ಮಾಜಿ ಅಧ್ಯಕ್ಷೆ ಮಂಗಳವಾರಪೇಟೆ ಯ ನಿವಾಸಿ ಶ್ರೀಮತಿ ಶ್ವೇತಾ ಗೋಪಾಲಕೃಷ್ಣ (35) ಇಂದು ಸಂಜೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಬಿಜೆಪಿ ಮುಖಂಡ ಮಂಗಳವಾರಪೇಟೆ ಕೃಷ್ಣ ರವರ ಧರ್ಮಪತ್ನಿಯಾದ ಇವರು ಕಳೆದ ಸಾಲಿನಲ್ಲಿ ನಗರಸಭೆಯ ಅಧ್ಯಕ್ಷರಾಗಿ ಅಧಿಕಾರ ನಡಸಿದ್ದರು.
ವಿಶ್ವ ಹೃದಯದ ದಿನವೇ ಹೃದಯಾಘಾತಕ್ಕೆ ಬಲಿಯಾಗಿರುವುದು ದುರ್ದೈವವಾಗಿದ್ದು ಇವರ ಆತ್ಮಕ್ಕೆ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ನಗರಸಭೆಯ ಎಲ್ಲಾ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲ್ಲೂಕಿನ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯು ನಾಳೆ ಮಧ್ಯಾಹ್ನ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು