ಟಿವಿ9 ರಾಜು ಎಂದೇ ಹೆಸರುವಾಸಿಯಾಗಿದ್ದ ಹಲಸಿನಮರದದೊಡ್ಡಿ ರಾಜು ನಿಧನ
ಚನ್ನಪಟ್ಟಣ:ಅ/14/20/ಬುಧವಾರ. ಹಿರಿಯ ಮಾಧ್ಯಮ ವರದಿಗಾರರಾಗಿದ್ದ Tv9 ರಾಜುರವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಚನ್ನಪಟ್ಟಣದ ಕನಕನಗರಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಇಂದು ಮದ್ಯಾಹ್ನ 01-00 ಗಂಟೆಗೆ ಹಲಸಿನಮರದದೊಡ್ಡಿ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನೇರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತ ರಾಜು ರವರು ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳು, ಸಹೋದರ ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ರಾಮನಗರ ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಗಣ್ಯರು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು