Tel: 7676775624 | Mail: info@yellowandred.in

Language: EN KAN

    Follow us :


ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ನಿಲ್ಲಿಸಬೇಕು : ಡಾ. ಬೈರಮಂಗಲ ರಾಮೇಗೌಡ

Posted date: 24 Nov, 2020

Powered by:     Yellow and Red

ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ನಿಲ್ಲಿಸಬೇಕು : ಡಾ. ಬೈರಮಂಗಲ ರಾಮೇಗೌಡ

ರಾಮನಗರ : ಜನಾಂಗ ಜನಾಂಗಗಳ ನಡುವೆ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿವೆ. ಇದು ನಿಲ್ಲಬೇಕು ಎಂದು ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.

ನಗರದ ಶಾಂತಲಾ ಕಲಾಕೇಂದ್ರದ ದರ್ಪಣ ಸಭಾಂಗಣದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಹಾಗೂ ಗೀತಗಾಯನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ರಾಜಕೀಯ ಪಕ್ಷಗಳು ಚರ್ಚೆ ಮಾಡಿ ಅಭಿವೃದ್ಧಿ ಪ್ರಾಧಿಕಾರಿಗಳನ್ನು ಅಥವಾ ನಿಗಮಗಳನ್ನು ಸ್ಥಾಪನೆ ಮಾಡಿದರೆ ಗೊಂದಲಗಳು ಉಂಟಾಗುವುದಿಲ್ಲ ಎಂದು ತಿಳಿಸಿದರು.

ರಾಜಕೀಯ ವ್ಯಕ್ತಿಗಳನ್ನು ಟೀಕಿಸಿ ಬರೆದಾಗ ಅವರನ್ನು ಜೈಲಿಗಟ್ಟುವ ಕೆಲಸ ನಡೆಯುತ್ತಿದೆ. ಇದು ನಿಲ್ಲಬೇಕು. ಕನ್ನಡ ನಾಡು, ನುಡಿಯ ವಿಷಯದಲ್ಲಿ ಎಲ್ಲಾ ಸರ್ಕಾರಗಳು ಆಶ್ವಾಸನೆಗಳನ್ನು, ಭರವಸೆಗಳನ್ನು ನೀಡುತ್ತಾ ಬಂದಿವೆಯೆ ಹೊರೆತು ಕಾರ್ಯಗತಗೊಳಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ವಿನುತ ಮಾತನಾಡಿ ಮೈಸೂರು ಸಂಸ್ಥಾನದಂತೆ ಉತ್ತರ ಕರ್ನಾಟಕವನ್ನು ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ 1973 ನವೆಂಬರ್ 1 ರಂದು ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ಎಂಬ ಹೆಸರನ್ನು ಇಡಲಾಯಿತು. ಆದರೆ ಉತ್ತರ ಕರ್ನಾಟಕದ ಭಾಗವು ಇಂದೂ ಸಹ ಅಭಿವೃದ್ಧಿಯತ್ತ ಮುಖ ಮಾಡಿಲ್ಲ ಎಂದು ತಿಳಿಸಿದರು.


ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡಬೇಕಿದೆ. ಉನ್ನತ ವ್ಯಾಸಂಗಕ್ಕೆ ಬೇಕಾದ ಸಂಪನ್ಮೂಲ ಪುಸ್ತಕಗಳನ್ನು ಅನುವಾದ ಮಾಡಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಾಹಿತಿ ಡಾ. ಮಲ್ಲಿಕಾರ್ಜುನ ಛಬ್ಬಿ ಮಾತನಾಡಿ ಕವಿಯಾದವನು ಹೆಚ್ಚು ಅಧ್ಯಯನ ಮಾಡಬೇಕು. ತನ್ನ ದೇಸಿ ನೆಲೆಯಲ್ಲಿ ಕವಿತೆಗಳನ್ನು ಬರೆದಾಗ ಅದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಸಾಂಸ್ಕøತಿಕ ಸಂಘಟಕಿ ಜೆ. ಶಾಂತಬಾಯಿ, ರಂಗಭೂಮಿಯ ಹಿರಿಯ ಕಲಾವಿದೆ ಎನ್. ಶಾಂತಮ್ಮ, ತೊಗಲುಗೊಂಬೆಯಾಟದ ಕಲಾವಿದೆ ಗೌರಮ್ಮ, ಸಾಂಸ್ಕøತಿಕ ಸಂಘಟಕಿ ಕವಿತಾರಾವ್, ನಿವೃತ್ತ ಅಧ್ಯಾಪಕ ಬಿ. ನರಸಿಂಹಯ್ಯ, ಕವಿ ಕಾಕೋಳು ಶೈಲೇಂದ್ರ ಅವರನ್ನು ಸನ್ಮಾನಿಸಲಾಯಿತು.

ಕವಿಗಳಾದ ಡಾ. ಅಂಕನಹಳ್ಳಿ ಪಾರ್ಥ, ಎಚ್.ಕೆ. ಶೈಲಾಶ್ರೀನಿವಾಸ್, ಎಸ್. ನರಸಿಂಹಸ್ವಾಮಿ, ಡಾ. ಎಚ್.ವಿ. ಮೂರ್ತಿ, ಎಂ.ಎಸ್. ಚನ್ನವೀರಪ್ಪ, ಜಿ. ಕೃಷ್ಣಾನಾಯಕ್ ಅವರು ಕವನಗಳನ್ನು ವಾಚಿಸಿದರು. ಗಾಯಕರಾದ ಕೆಂಗಲ್ ವಿನಯ್ ಕುಮಾರ್, ಗೋಪಾಲ್ ಅವರು ಗೀತಗಾಯನ ನಡೆಸಿಕೊಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಂ.ಲಿಂ. ನಾಗರಾಜ್, ಸ್ನೇಹಕೂಟ ಸಂಸ್ಥೆ ಅಧ್ಯಕ್ಷ ಎಚ್.ಪಿ. ನಂಜೇಗೌಡ, ಅಮೃತ ವಿಕಲಚೇತನ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್, ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಜಿ.ಪಿ. ಕಾಡೇಗೌಡ ಗಬ್ಬಾಡಿ, ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಜಿಲ್ಲಾ ಲೇಖಕರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ರುದ್ರೇಶ್ವರ, ತಾಲ್ಲೂಕು ಅಧ್ಯಕ್ಷ ಸಿ. ರಮೇಶ್ ಹೊಸದೊಡ್ಡಿ ಇತರರು ಇದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑