ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿ
ರಾಮನಗರ:ನ/26/20/ಗುರುವಾರ. ಮಾಗಡಿ ತಾಲ್ಲೂಕಿನಲ್ಲಿ 3.99 ಕೋಟಿ ರೂ ವೆಚ್ಚದಲ್ಲಿ ಹಮ್ಮಿಕೊಂಡಿರುವ ಚಕ್ರಬಾವಿ ಹಾಗೂ ಇತರೆ 12 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಯನ್ನು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಸಿಎನ್ ಅಶ್ವಥ್ ನಾರಾಯಣ ಅವರು ಗುರುವಾರ ಪರಿಶೀಲಿಸಿದರು.
ಕಾಮಗಾರಿ ಪೂರ್ಣಗೊಂಡರೆ 12 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಮಾಗಡಿ ಶಾಸಕ ಎ.ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಹಾಸ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು