ನ್ಯಾಯಾಧೀಶರಿಂದ ಮಾಸ್ಕ್ ವಿತರಣೆ
ರಾಮನಗರ:ಡಿ/03/20/ಗುರುವಾರ: ಮಾಸ್ಕ್ ಧರಿಸುವುದರಿಂದ ಕೋವಿಡ್-19 ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ ಅವರು ತಿಳಿಸಿದರು.
ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿದ ನ್ಯಾಯಾಧೀಶರು ನಗರದ ವಿವಿಧ ವಾರ್ಡಗಳಲ್ಲಿ ಸಂಚರಿಸಿ ಮಾಸ್ಕ್ ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಮಾಸ್ ಧರಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿಕೊಟ್ಟರು.
*ಮಾಸ್ಕ್ ವಿತರಣೆ :* ಕೋವಿಡ್ ಗೆ ಲಸಿಕೆ ಲಭ್ಯವಾಗುವ ವರೆಗೂ ಸಾರ್ವಜನಿಕರು ಮುಂಜಾಗರೂಕತಾ ಕ್ರಮವಾಗಿ ಹೊರಗೆ ಹೋಗುವಾಗ ತಪ್ಪದೇ ಮಾಸ್ಕನ್ನು ಧರಿಸಿ ಹೋಗುವುದು ಸೂಕ್ತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು