ಎ ಆರ್ ಎಂ ರೇಷ್ಮೆ ನೂಲು ಬಿಚ್ಚಣಿಕೆ ಫಿಲೇಚರಿಯಲ್ಲಿ ಮಂಡ್ಯ ಮೂಲದ ಕಾರ್ಮಿಕ ನೇಣು ಬಿಗಿದು ಸಾವು, ದೂರು ದಾಖಲು
ಚನ್ನಪಟ್ಟಣ:ಡಿ/07/20/ಸೋಮವಾರ. ತಾಲ್ಲೂಕಿನ ಸುಣ್ಣಘಟ್ಟ ಬಳಿಯ ನೀಲಸಂದ್ರ ರಸ್ತೆಯಲ್ಲಿರುವ ಎ ಎಂ ಆರ್ ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚೊಟ್ಟನಹಳ್ಳಿ ಗ್ರಾಮದ ಮಹೇಶ್ (೨೫) ನೇಣು ಬಿಗಿದುಕೊಂಡು ಸಾವನ್ನಪ್ಪಿದ ವ್ಯಕ್ತಿ. ಈತ ಕಳೆದೊಂದು ವರ್ಷದಿಂದ ಇದೇ ಫಿಲೇಚರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಫಿಲೇಚರಿಗೆ ಹೊಂದಿಕೊಂಡಂತೆ ಇರುವ ಹಿಂದಿನ ಕೊಠಡಿಯಲ್ಲಿ ವಾಸವಾಗಿದ್ದನೆಂದು ತಿಳಿದುಬಂದಿದೆ.
ತನ್ನದೇ ರುಮಾಲಿನ್ನು (ಮಪ್ಲರ್) ಮೇಲಿನ ಕಬ್ಬಿಣದ ಸರಳಿಗೆ ಕಟ್ಟಿ ಪ್ಲಾಸ್ಟಿಕ್ ಕುರ್ಚಿಯ ಮೇಲೆ ಹತ್ತಿ ನೇಣು ಬಿಗಿದುಕೊಂಡಿರವುದಾಗಿ ಮೇಲ್ನೋಟಕ್ಕೆ ಕಂಡುಬರುತ್ತದೆ. ಸ್ಥಳದಲ್ಲಿಯೇ ಬಿಯರ್ ಬಾಟಲಿಯೊಂದಿದ್ದು ನೇಣಿಗೂ ಮುನ್ನಾ ಬಿಯರ್ ಕುಡಿದಿರಬಹುದು ಎಂಬ ಶಂಕೆಯನ್ನು ಪೋಲೀಸರು ವ್ಯಕ್ತಪಡಿಸಿದ್ದಾರೆ.
ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ ನಂತರ ಶವವನ್ನು ಕೆಳಗಿಳಿಸಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಶವವನ್ನು ನೀಡಿದ್ದು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಗ್ರಾಮಾಂತರ ವೃತ್ತ ನಿರೀಕ್ಷಕ ಡಿ ಶಿವಕುಮಾರ್, ಎಸ್ ಐ ಶಿವಕುಮಾರ್ ಮತ್ತು ಸಿಬ್ಬಂದಿಗಳು ಹಾಗೂ ಫಿಲೇಚರಿ ಮಾಲೀಕ ಎಲೆಕೇರಿ ಶ್ರೀನಿವಾಸಮೂರ್ತಿ ಭೇಟಿ ನೀಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು