Tel: 7676775624 | Mail: info@yellowandred.in

Language: EN KAN

    Follow us :


ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದ ಜೆ ಬ್ಯಾಡರಹಳ್ಳಿ ಗ್ರಾಮದ ಪ್ರಸನ್ನ.

Posted date: 13 Jan, 2021

Powered by:     Yellow and Red

ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದ ಜೆ ಬ್ಯಾಡರಹಳ್ಳಿ ಗ್ರಾಮದ ಪ್ರಸನ್ನ.

ಚನ್ನಪಟ್ಟಣ:ಜ/13/21/ಬುಧವಾರ. ತಾಲ್ಲೂಕಿನ ಜೆ ಬ್ಯಾಡರಹಳ್ಳಿ ಗ್ರಾಮದ ಇಪ್ಪತ್ತೇಳು ವರ್ಷದ ಪ್ರಸನ್ನ ರವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇತ್ತೀಚಿಗೆ ರಾಮನಗರ ಚನ್ನಪಟ್ಟಣ ನಡುವೆ ಕಾರು ಮತ್ತು ಬೈಕ್ ನಡುವೆ ಢಿಕ್ಕಿಯಾಗಿ ಪ್ರಸನ್ನ ರವರ ತಲೆಗೆ ಪೆಟ್ಟು ಬಿದ್ದು ಮೆದುಳು ನಿಷ್ಕ್ರಿಯವಾಗಿತ್ತು.  ತದನಂತರ ಬದುಕುಳಿಯುವುದು ಕಷ್ಟ ಎಂಬರಿತ ಕುಟುಂಬದವರು ಬೆಂಗಳೂರಿನ ಆಸ್ಟರ್ ಆರ್ ವಿ ಆಸ್ಪತ್ರೆಗೆ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಮೃತ ಪ್ರಸನ್ನ ರವರು ತಾಲ್ಲೂಕಿನ ಕುಂತೂರು ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಅದೇ ಶಾಲೆಯ ಸಂಸ್ಥಾಪಕರಾದ ರಾಮಚಂದ್ರ ರವರ ಅಣ್ಣ ತಿಮ್ಮೇಗೌಡರ ಪುತ್ರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದ್ದು, ತಾಲ್ಲೂಕಿನ ಗಣ್ಯರು, ಸ್ನೇಹಿತರು ಮತ್ತು ಬಂಧುಗಳು ಕಂಬನಿ ಮಿಡಿದಿದ್ದಾರೆ.


ಗೋ ರಾ ಶ್ರೀನಿವಾಸ್...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑