ಗಣರಾಜ್ಯೋತ್ಸವ ಹಬ್ಬ ಸರಳವಾಗಿ ಆಚರಿಸಲಾಗುತ್ತದೆ ತಹಶಿಲ್ದಾರ್ ನಾಗೇಶ್
- ಚನ್ನಪಟ್ಟಣ:ಜ/19/21/ಮಂಗಳವಾರ.
ಇದೇ ತಿಂಗಳ 26 ನೇ ತಾರೀಖಿನಂದು ನಡೆಯುವ ಗಣರಾಜ್ಯೋತ್ಸವ ಹಬ್ಬವನ್ನು ಸರಳವಾಗಿ, ಅರ್ಥಪೂರ್ಣವಾಗಿ ಹಾಗೂ ಪ್ರೋಟೋಕಾಲ್ ನಿಯಮಾನುಸಾರ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ದಂಡಾಧಿಕಾರಿ ನಾಗೇಶ್ ರವರು ತಿಳಿಸಿದರು.
ಅವರು ಇಂದು ತಾಲ್ಲೂಕು ಕಛೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಈ ವಿಷಯ ತಿಳಿಸಿದರು.
ಕೋವಿಡ್-19 ಸೋಂಕಿನ ಕಾರಣದಿಂದ ಅದ್ದೂರಿ ಆಚರಣೆಗೆ ತಡೆ ಹಾಕಲಾಗಿದೆ. ನಿಯಮಾನುಸಾರ ಎಲ್ಲಾ ಜನಪ್ರತಿನಿಧಿಗಳು ಮತ್ತು ಇಲಾಖಾವಾರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಶಾಲಾ ಕಾಲೇಜು ಮಕ್ಕಳ ಕಾರ್ಯಕ್ರಮವನ್ನು ಕೋವಿಡ್ ಕಾರಣದಿಂದ ಕೈಬಿಡಲಾಗಿದೆ ಎಂದು ಅವರು ತಿಳಿಸಿದರು.
ತಾಲ್ಲೂಕಿನ ಎಲ್ಲಾ ಇಲಾಖೆಗಳ ಕಟ್ಟಡದ ಮೇಲೆ ಎರಡು ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಮಾಡಲು ಆಯಾಯ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಲಾಖಾವಾರು ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜ ಸೇವಕರು ಸೇರಿದಂತೆ ಸಾಧನೆಗೈದ ಮಂದಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.
ಸಭೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು