Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ

Posted date: 20 Jan, 2021

Powered by:     Yellow and Red

ರಾಮನಗರ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ

ರಾಮನಗರ:ಜ/20/21/ಬುಧವಾರ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ (ಮನರೇಗಾ) ಮಹಿಳೆಯರು ಭಾಗವಹಿಸುವಿಕೆ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನವರಿ 15 ರಿಂದ ಫೆಬ್ರವರಿ 15 ರವರೆಗೆ ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.


ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ (ಸಿಇಒ) ಮಹಿಳಾ ಪ್ರಧಾನ ಕುಟುಂಬಗಳನ್ನು ಗುರುತಿಸುವುದು, ಕಾಮಗಾರಿ ಸ್ಥಳಗಳನ್ನು ಮಹಿಳೆ ಮತ್ತು ಮಕ್ಕಳ ಸ್ನೇಹಿಯಾಗಿ ಮಾಡುವುದು, ಸ್ವಸಹಾಯ ಸಂಘಗಳ ಭಾಗವಹಿಸುವಿಕೆಗೆ ಉತ್ತೇಜನ ನೀಡುವುದು, ಮಹಿಳಾ ಕಾರ್ಮಿಕರು ಭಾಗವಹಿಸಲು ಪೇರೇಪಿಸುವುದಕ್ಕಾಗಿ ಮಹಿಳಾ ಕಾಯಕ ಬಂಧುಗಳಿಗೆ ತರಬೇತಿ ಆಯೋಜಿಸುವಂತೆ ಸೂಚಿಸಿರುತ್ತಾರೆ.


ರಾಮನಗರ ಜಿಲ್ಲೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇ. 49.30 % ರಷ್ಟು ಇದೆ. ಈ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆಯನ್ನು ಈಗಿರುವ ಪ್ರಮಾಣಕ್ಕಿಂತ ಕನಿಷ್ಟ ಶೇ.5 ರಷ್ಟು ಹೆಚ್ಚಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ.  ಈ ಹಿನ್ನೆಲೆಯಲ್ಲಿ ಜನವರಿ 15 ರಿಂದ ಫೆಬ್ರವರಿ 15 ರವರೆಗೆ ಕುಟುಂಬಗಳ ಸಮಿಕೆಯನ್ನು ನಡೆಸಲು ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಿಕೊಂಡಿದ್ದು, ತಾಲ್ಲೂಕು ಮಟ್ಟದಲ್ಲಿ ಎರಡು ಟಾಸ್ಕ್ ಫೋರ್ಸ್ ರಾಮನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಮ್ ಅವರು ತಿಳಿಸಿದ್ದಾರೆ.


ಮೊದಲನೇ ಹಂತದಲ್ಲಿ ಪ್ರತಿ ತಾಲ್ಲೂಕಿನಿಂದ ಮಹಿಳೆಯರ ಭಾಗವಹಿಸುವಿಕೆ ಕಡಿಮೆ ಇರುವ 4 ಗ್ರಾಮ ಪಂಚಾಯಿತಿಗಳನ್ನು ಚನ್ನಪಟ್ಟಣ ತಾಲ್ಲೂಕಿನಿಂದ ಎಲೆತೋಟದಹಳ್ಳಿ, ಬಿ.ವಿ.ಹಳ್ಳಿ, ಇಗ್ಗಲೂರು, ಹಾರೊಕೊಪ್ಪ, ಕನಕಪುರ ತಾಲ್ಲೂಕಿನಿಂದ ಚೀಲೂರು, ಮರಳೇಬೇಕುಪ್ಪೆ, ಯಲಚವಾಡಿ, ಹೇರೆಂದ್ಯಾಪನಹಳ್ಳಿ, ಮಾಗಡಿ ತಾಲ್ಲೂಕಿನಿಂದ ಮೊಟಗೊಂಡನಹಳ್ಳಿ, ಬಿಸ್ಕೂರು, ಮಾಡಬಾಳ್, ಲಕ್ಕೇನಹಳ್ಳಿ, ರಾಮನಗರ ತಾಲ್ಲೂಕಿನಿಂದ ಕೂಟಗಲ್, ಕೈಲಾಂಚ, ಹರೀಸಂದ್ರ, ಗೋಪಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪ್ರತಿ ಮನೆ ಮನೆಯ ಸಮಿಕ್ಷೆಯನ್ನು ನಡೆಸಲು ಅಗ್ಯವಿರುವ ಸಾಮಗ್ರಿಗಳಾದ ಸರ್ವೆ ನಮೂನೆ, ಸ್ಟೀಕರ್ಸ್, ಐ.ಡಿ ಕಾರ್ಡ್, ಲೇಖನ ಸಾಮಗ್ರಿಗಳನ್ನು ಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿಗೆ ಮುಂಗಡವಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.


2 ನೇ ಹಂತದ ಸಮಿಕ್ಷೆಯನ್ನು ನಡೆಸಲು ಫೆಬ್ರವರಿ 15 ರಿಂದ ಮಾರ್ಚ್ 15 ರವರೆಗೆ  ಪ್ರತಿ ತಾಲ್ಲೂಕಿನಿಂದ 6 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಮೊದಲು ಪ್ರತಿ ಮನೆ ಮನೆಗೂ ಬೇಟಿ ನೀಡಿ ಕುಟುಂಬದ ಮಹಿಳೆಯರಿಗೆ ಸಮಿಕ್ಷೆ ನಡೆಸಿ, ಕೆಲಸ ಮಾಡಲು ಇಚ್ಚಿಸುವ ಮಹಿಳೆಯರಿಂದ ಬೇಡಿಕೆಯನ್ನು ಪಡೆದು, ಆಗಿಂದ್ದಾಗೆ ಕೂಲಿಯನ್ನು ನೀಡಲು ಅಗತ್ಯ ಕ್ರಮವಹಿಸಲಾಗಿದೆ. ಮಹಿಳಾ ಕಾಯಕೋತ್ಸವ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲ್ಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೀಯೋಜಿಸಲಾಗಿದ್ದು, ಕಾಯಕೋತ್ಸವದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸುವ ಅಧಿಕಾರಿ ಇಲ್ಲವೆ ಸಿಬ್ಬಂದಿಗಳಿಗೆ ಬಹುಮಾನ ವಿತರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.


ಜಿಲ್ಲೆಯಲ್ಲಿ ಮಹಿಳಾ ಕಾಯಕೊತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ತರಬೇತಿಯನ್ನು ನೀಡಿ, ಮಹಿಳಾ ಫಲಾನುಭವಿಗಳು ಸಮಿಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಯೋಜನೆಯ ಸದುಪಯೋಗವನ್ನು ಪಡೆಯುವಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು 

ಭಾಗವಹಿಸುವಿಕೆಗೆ ಕ್ರಮ ವಹಿಸಲಾಗಿದೆ ಎಂದು ರಾಮನಗರ ಜಿಲ್ಲಾ

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑