Tel: 7676775624 | Mail: info@yellowandred.in

Language: EN KAN

    Follow us :


ಶ್ರಮದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯ: ಅಪರ ಜಿಲ್ಲಾಧಿಕಾರಿ ಜವರೇಗೌಡ

Posted date: 06 Feb, 2021

Powered by:     Yellow and Red

ಶ್ರಮದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯ: ಅಪರ ಜಿಲ್ಲಾಧಿಕಾರಿ ಜವರೇಗೌಡ

ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಉದ್ಯೋಗ ಪಡೆಯಲು ವಿದ್ಯಭ್ಯಾಸದ ಜೊತೆ ಜೊತೆಗೆ ಕೌಶಲ್ಯಗಳನ್ನು ರೂಢಿಸಿಕೊಂಡು ಶ್ರಮ ಪಟ್ಟರೆ ಉದ್ಯೋಗ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.


ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಮದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯೋಗ ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಯಾಗಿದೆ. ಅದೃಷ್ಟದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಿಲ್ಲ. ಉದ್ಯೋಗ ಪಡೆಯಲು ಶೇ 99 ಶ್ರಮ ಇರಲೇಬೇಕು. ಅದೃಷ್ಟದ ಪಾತ್ರ ಕೇವಲ 1% ಎಂದರು.


ಉದ್ಯೋಗ ಪಡೆದುಕೊಳ್ಳಲು ಬೇಕಿರುವ ಹಲವಾರು ರೀತಿಯ ತರಬೇತಿಗಳನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿದೆ. ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಸಂಘಟಿಸಲಾಗುತ್ತಿದೆ. ಇಂತಹ ಅವಕಾಶಗಳು ಹಿಂದೆ ಇರಲಿಲ್ಲ‌. ಇಂದು ಸರ್ಕಾರ ನಿಮಗೆ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.


ಮಹಾನ್ ವ್ಯಕ್ತಿಗಳಾದ ಅಬ್ದುಲ್ ಕಲಾಂ,  ಥಾಮಸ್ ಆಲ್ವ ಎಡಿಷನ್ ಮುಂತಾದವರ ಹೆಸರು ಚಿರಪರಿಚಿತವಾಗಿ ಉಳಿಯಲು ಕಾರಣ ಅವರಲಿದ್ದ ಶ್ರದ್ಧೆ, ಪ್ರಯತ್ನ, ಹೆಚ್ಚಿನ ಜ್ಞಾನರ್ಜನೆ, ಪರಿಶ್ರಮ‌. ಇವುಗಳನ್ನು ಇಂದಿನ ಯುವಜನತೆ ರೂಢಿಸಿಕೊಳ್ಳಬೇಕು ಎಂದರು.


*221 ಜನರಿಗೆ ಉದ್ಯೋಗ:* ಜಿಲ್ಲೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 108 ಪುರುಷರು, 113 ಮಹಿಳೆಯರು ಸೇರಿ ಒಟ್ಟು 221 ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಶಿವಮೂರ್ತಿ .ಕೆ ಅವರು ತಿಳಿಸಿದ್ದಾರೆ.


ಉದ್ಯೋಗ ಮೇಳಕ್ಕೆ  27  ಸಂಸ್ಥೆಗಳನ್ನು ಸಂಘಟಿಸಲಾಗಿತ್ತು, ಉದ್ಯೋಗ ಮೇಳದಲ್ಲಿ 362 ಪುರುಷರು ಹಾಗೂ 209 ಮಹಿಳೆಯರು ಒಟ್ಟು 571 ಜನರು ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಶೇಖರ್ ಗಡದ್ ಎಸ್,  ಜಿಲ್ಲಾ ಕೌಶಲ್ಯಾಧಿಕಾರಿ ಸಿ.ಪಿ.ಲಕ್ಷ್ಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕಿಶೋರ ಎಂ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑