Tel: 7676775624 | Mail: info@yellowandred.in

Language: EN KAN

    Follow us :


ಯಡಿಯೂರಪ್ಪ ಪರ ಡಿಸಿಎಂ ಅಶ್ವಥ್ ನಾರಾಯಣ ಬ್ಯಾಟಿಂಗ್

Posted date: 17 Jun, 2021

Powered by:     Yellow and Red

ಯಡಿಯೂರಪ್ಪ ಪರ ಡಿಸಿಎಂ ಅಶ್ವಥ್ ನಾರಾಯಣ ಬ್ಯಾಟಿಂಗ್

ರಾಮನಗರ: ಡಿಸಿಎಂ ಅಶ್ವಥ್ ನಾರಾಯಣ ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದು, ಬಿಜೆಪಿ ಪಕ್ಷದ ಹೆಸರಿನಲ್ಲಿ ನಾವು ಮುಂದಿನ ಚುನಾವಣೆ ಮಾಡುತ್ತೇವೆ. ನನ್ನ ಸ್ಥಾನದ ಮೇಲೆ ಆಸೆ ಇಟ್ಟುಕೊಂಡಿರುವವರು ಮೊದಲು ಜಿಲ್ಲೆಯಲ್ಲಿ ಕೆಲಸ ಮಾಡಿ ತೋರಿಸಲಿ ಎಂದು ಸಿ ಪಿ ಯೋಗೇಶ್ವರ್ ಗೂ ಅವರು ಟಾಂಗ್ ನೀಡಿದರು.


ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿ ಪಕ್ಷದ ಶಕ್ತಿಯ ಮೇಲೆ ನಾವು ಚುನಾವಣೆ ಮಾಡ್ತೇವೆ.ಎಲ್ಲರೂ ಸಹ ಬಿಜೆಪಿ ಪಕ್ಷದ ಅಡಿಯಲ್ಲಿ,  ಪಕ್ಷದ ನೆರಳಲ್ಲಿ ಹೋಗ್ತೇವೆ.ಮುಂದಿನ ಚುನಾವಣೆಯ ನಾಯಕತ್ವದ ಬಗ್ಗೆ ಪಕ್ಷ ತಿಳಿಸಲಿದೆ, ಬಿಜೆಪಿ ಪಕ್ಷಕ್ಕೆ ಅಂತಹ ಶಕ್ತಿಯಿದೆ ಎಂದು ಹೇಳಿದರು.


ಆದರೆ ಈಗ ಸಿಎಂ ಯಡಿಯೂರಪ್ಪ ನವರ ಸಂಪುಟದಲ್ಲಿ ನಾನುಸಚಿವನಾಗಿದ್ದೇನೆ.

ಈಗ ಅವರ ನೇತ್ಱತ್ವದಲ್ಲಿಯೇ ಸರ್ಕಾರ ನಡೆಯುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ಅವರ ನಾಯಕತ್ವದಲ್ಲಿಯೇ ಮುಂದುವರೆಯಲಿದೆ ಎಂದ ಅವರು, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು, ಉಸ್ತುವಾರಿಗಳು ತಿಳಿಸಿದ್ದಾರೆ  ಎಂದು ಪ್ರತಿಕ್ರಿಸಿದರು.


ರಾಮನಗರ ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರ ಕುರಿತು  ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ, ನಾನು ಜ್ಯೋತಿಷಿ ಅಲ್ಲ, ಮುಂದಿನ ವಿಚಾರದ ಬಗ್ಗೆ ಹೇಳಲು ಆಗಲ್ಲ.ಈಗ ಮುಖ್ಯಮಂತ್ರಿಗಳು ನನಗೆ ಅವಕಾಶ ಕೊಟ್ಟಿದ್ದಾರೆ .ನಾನು ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದೇನೆ ಎಂದರು.


ನನ್ನ ಸ್ಥಾನದ ಮೇಲೆ ಯಾರಾದರೂ ಆಸೆ ಇಟ್ಟುಕೊಳ್ಳಲಿ, ಅದರಲ್ಲಿ ತಪ್ಪಿಲ್ಲ. ಅವರು ಆ ಸ್ಥಾನ ಪಡೆಯುವ ಶಕ್ತಿ ಬೆಳೆಸಿಕೊಳ್ಳಲಿ.

ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲಿ ಜಿಲ್ಲಾ ಉಸ್ತುವಾರಿ ಆಕಾಂಕ್ಷಿ ಸಚಿವ ಸಿ ಪಿ ಯೋಗೇಶ್ವರ್ ಹೆಸರೇಳದೆ ಟಂಗ್ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑