ಟ್ರಾಕ್ಟರ್ ಪಲ್ಟಿ ಕರಲಹಳ್ಳಿ ಗ್ರಾಮದ ಇಬ್ಬರು ಯುವಕರು ಸ್ಥಳದಲ್ಲೇ ಮೃತ
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕು ಅಂಚೀಪುರ ಗ್ರಾಮದ ಬಳಿ ಟ್ರ್ಯಾಕ್ಟರ್ ಗೆ ಮಣ್ಣು ತುಂಬುವ ವೇಳೆ ಟ್ರ್ಯಾಕ್ಟರ್ ನ ಟ್ರೇಲರ್ ಮಗುಚಿಬಿದ್ದಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯ ಕರಲಹಳ್ಳಿ ಗ್ರಾಮದ 28 ವರ್ಷದ ಲೋಕೇಶ್ ಬಿನ್ ವೆಂಕಟೇಶ್ ಮತ್ತು 26 ವರ್ಷದ ವಿಕಾಸ್ ಬಿನ್ ನಾಗರಾಜು ಎಂಬ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಾಕ್ಟರ್ ನಲ್ಲಿ ಮಣ್ಣು ತುಂಬಿಕೊಂಡು ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ನ ಟ್ರೇಲರ್ ಮಗುಚಿದ್ದಿರಿಂದ ಇವರಿಬ್ಬರ ಮೇಲೆ ಮಣ್ಣು ಬಿದ್ದಿದ್ದೇ ಇವರ ಸಾವಿಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾಲಕ ಹಾಗೂ ಟ್ರಾಕ್ಟರ್ ನಲ್ಲಿ ಕುಳಿತ್ತಿದ್ದ ಮತ್ತೊಬ್ಬ ಸೇರಿ ಇಬ್ಬರ ಮೇಲೆ ಟ್ರ್ಯಾಕ್ಟರ್ ಮತ್ತು ಮಣ್ಣು ಬಿದ್ದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಇತ್ತೀಚೆಗೆ ಮದುವೆಯಾಗಿದ್ದು, ಮತ್ತೋರ್ವ ಅವಿವಾಹಿತನಾಗಿದ್ದಾನೆ. ಸ್ಥಳದಲ್ಲಿ ಮತ್ತು ಆಸ್ಪತ್ರೆಯ ಹೊರಾಂಗಣದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಗ್ರಾಮಸ್ಥರ ರೋದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಡಿವೈಎಸ್ಪಿ ರಮೇಶ್ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಅಕ್ಕೂರು ಪಿಎಸ್ಐ ಸರಸ್ವತಿ ರವರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತ ಯುವಕರ ಶವಗಳನ್ನ ಮರಣೋತ್ತರ ಪರೀಕ್ಷೆಗೆಂದು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಂತರ ವಾರಸುದಾರರಿಗೆ ಒಪ್ಪಿಸಲಾಗುವುದು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು