ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ ಮುಂಜಾನೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ರವರು ಮಾಹಿತಿ ನೀಡಿದ್ದಾರೆ.
ಕಳೆದ ವಾರಾಂತ್ಯದ ನಿಷೇಧಾಜ್ನೆ ವೇಳೆ ತಾಲ್ಲೂಕು ಆಡಳಿತದ ಯಾವ ಅಧಿಕಾರಿಗಳಿಗೂ ಸಂಪೂರ್ಣ ಅರಿವಿರಲಿಲ್ಲ. ಆಗಲೂ ಸಹ ಜಿಲ್ಲಾಧಿಕಾರಿಗಳೇ ಮಾಹಿತಿ ನೀಡಿದ್ದರು. ಆ ಸಮಯದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿದ್ದು, ಎಂದಿನಂತೆ ಜನರು ಗುಂಪು ಸೇರುವುದನ್ನು ಹೊರತುಪಡಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಲಾಗಿತ್ತು.
ಈ ವಾರದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಎಲ್ಲಾ ಅಂಗಡಿ ಮುಂಗಟ್ಟಗಳನ್ನು ತೆರೆಯಲು ಅವಕಾಶವಿತ್ತು. ಆದರೆ ಇಂದಿನ ವಾರಾಂತ್ಯ ಕರ್ಫ್ಯೂನಲ್ಲಿ ಸ್ವಲ್ಪ ಬದಲಾವಣೆ ಮಾಡಿ, ಮುಂಜಾನೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಅವಕಾಶ ಕಲ್ಪಿಸಿದೆ. ಜೊತೆಗೆ ಅವಶ್ಯಕ ವಸ್ತುಗಳ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ರವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಅನಗತ್ಯ ಓಡಾಟಕ್ಕೂ ಬ್ರೇಕ್ ಹಾಕಿದ್ದು, ಎಪಿಡೆಮಿಕ್ ಆ್ಯಕ್ಟ್ ನಡಿ ದೂರು ದಾಖಲಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು