Tel: 7676775624 | Mail: info@yellowandred.in

Language: EN KAN

    Follow us :


ಕನಕಪುರ ಪ್ರಾಧಿಕಾರದ ಅಧ್ಯಕ್ಷರ ಮಗ ಸುಖೇಶ್ ಚನ್ನಪಟ್ಟಣದಲ್ಲಿ ಆತ್ಮಹತ್ಯೆ

Posted date: 26 Jun, 2021

Powered by:     Yellow and Red

ಕನಕಪುರ ಪ್ರಾಧಿಕಾರದ ಅಧ್ಯಕ್ಷರ ಮಗ ಸುಖೇಶ್ ಚನ್ನಪಟ್ಟಣದಲ್ಲಿ ಆತ್ಮಹತ್ಯೆ

ಕನಕಪುರ ಯೋಜನಾ ಪ್ರಾಧಿಕಾರದ ಹಾಲಿ ಅಧ್ಯಕ್ಷ, ಬಿಜೆಪಿ ಪಕ್ಷದ ಮುಖಂಡ ಹೊನ್ನಿಗನಹಳ್ಳಿ ಗ್ರಾಮದ ಜಗನ್ನಾಥ ರವರ ಪುತ್ರ ಸುಖೇಶ್ (19) ಚನ್ನಪಟ್ಟಣ ನಗರದ ರಾಮಮ್ಮನ ಕೆರೆ ಪಕ್ಕದಲ್ಲಿ ಹಾದು ಹೋಗಿರುವ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಸುಖೇಶ್ ಮೈಸೂರಿನ ಜೆಎಸ್ಎಸ್ ಪದವಿ ಕಾಲೇಜಿನಲ್ಲಿ ಎಲ್ ಎಲ್ ಬಿ ವ್ಯಾಸಂಗ ಮಾಡುತ್ತಿದ್ದು, ಇವರ ತಂದೆ ಜಗನ್ನಾಥ ರವರು ಮೂಲ ಬಿಜೆಪಿಗರಾಗಿ ಕನಕಪುರ ತಾಲ್ಲೂಕಿನಲ್ಲಿ ಗುರುತಿಸಿಕೊಂಡಿದ್ದರು. ಇದರ ವರವಾಗಿಯೇ ಇವರಿಗೆ ಕನಕಪುರ ನಗರದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದುಬಂದಿತ್ತು.


ಸುಖೇಶ್ ಚನ್ನಪಟ್ಟಣಕ್ಕೆ ಏಕೆ ಬಂದು ಆತ್ಮಹತ್ಯೆ ಮಾಡಿಕೊಂಡ, ಕಾರಣ ಏನು ಎಂಬುದು ನಿಗೂಢವಾಗಿದ್ದು, ಚನ್ನಪಟ್ಟಣ ರೈಲ್ವೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಲಾಯಿತು. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಮತ್ತು ಕನಕಪುರ ತಾಲೂಕಿನ ಬಿಜೆಪಿ ಯ ಮುಖಂಡರು, ಕಾರ್ಯಕರ್ತರು ಮತ್ತು ಕುಟುಂಬದವರು ಭೇಟಿ ನೀಡಿದರು. ಶನಿವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದಲ್ಲಿ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑