ಅಗ್ರಿಗೋಲ್ಡ್ ಕಂಪನಿ ವಂಚನೆ ಪ್ರಕರಣ. ಒಂದೇ ನ್ಯಾಯಾಲಯ ಸ್ಥಾಪಿಸಲು ಹೈಕೋರ್ಟ್ ಗೆ ಮನವಿ
ಬೆಂಗಳೂರು: ಹೂಡಿಕೆದಾರರಿಗೆ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಸಿದಂತೆ ಅಗ್ರಿ ಗೋಲ್ಡ್ ಕಂಪನಿ ವಿರುದ್ಧ ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಒಂದೇ ನ್ಯಾಯಾಲಯ ಸ್ಥಾಪಿಸಲು ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ವಂಚನೆ ಪ್ರಕರಣ ಸಂಬಂಧ ಮಂಗಳೂರಿನ ಅಗ್ರಿ ಗೋಲ್ಡ್ ಗ್ರಾಹಕರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಈ ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಮುಂದೂಡಿರುವುದಾಗಿ ತಿಳಿದುಬಂದಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು