ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 101 ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮತ್ತು ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.
ಮಂಜುಳಾ ಮತ್ತು ಲೇಟ್ ವಸಂತಕುಮಾರ್ ಅವರ ಪುತ್ರಿಯಾದ ಶ್ವೇತಾರಾಣಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ನೊಂದಿಗೆ ಪ್ರೊ.ವಿ.ನರಸಿಂಹಮೂರ್ತಿ ಚಿನ್ನದ ಪದಕ, ಪ್ರೊ.ನೀಲಕಂಠ ಶಾಸ್ತ್ರಿ ನಗದು ಬಹುಮಾನ ಪಡೆದಿದ್ದಾರೆ.
ಸಂಶೋಧನಾ ವಿದ್ಯಾರ್ಥಿಯೂ ಆಗಿರುವ ಶ್ವೇತಾರಾಣಿ ಅವರು ವಿವಿಧ ಪುಸ್ತಕಗಳನ್ನು ಬರೆದಿದ್ದಾರೆ. ಪ್ರಸ್ತುತ ಮತ್ತೀಕೆರೆ ಗ್ರಾಮದಲ್ಲಿ ನೆಲೆಸಿದ್ದಾರೆ. ಈಕೆಯ ಸಾಧನೆಯನ್ನು ಮತ್ತೀಕೆರೆ ಗ್ರಾಮಸ್ಥರು ಪ್ರಶಂಸಿಸಿದ್ದು, ಮತ್ತಷ್ಟು ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845846139.
ಪ್ರತಿಕ್ರಿಯೆಗಳು