ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ
ರಾಮನಗರ: ಸಾತನೂರು ಪೋಲೀಸ್ ಠಾಣೆ ವ್ಯಾಪ್ತಿಯ ಶ್ರೀ ಕ್ಷೇತ್ರ ಕಬ್ಬಾಳು ಗ್ರಾಮದ ಬೆಟ್ಟದಲ್ಲಿ ತನ್ನ ಪ್ರೀಯಕರನ ಜೊತೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಕಬ್ಬಾಳು ಗ್ರಾಮದ ಕಬ್ಬಾಳು ಬೆಟ್ಟದಿಂದ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕಬ್ಬಾಳು ಬೆಟ್ಟದಲ್ಲಿ ಘಟನೆ ನಡೆದಿದ್ದು ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚಿಟಿ ತಾಲೂಕು ಉರುಗ್ಯಂ ಗ್ರಾಮದ ಚಂದನ(20) ಹಾಗೂ ಆಕೆಯ ಪ್ರಿಯಕರ ಅದೇ ಗ್ರಾಮದ ಸತೀಶ್ ಕುಮಾರ್(24) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಚಂದನಳನ್ನು ಆಕೆಯ ಪೋಷಕರು ತಮ್ಮ ಗ್ರಾಮದ ಪಕ್ಕವಿರುವ ದೊಡ್ಡಮರಳ್ಳಿ ಗ್ರಾಮದ ಗಣೀಶ್ ಎಂಬಾತನ ಜೊತೆ ಕಳೆದ ವರ್ಷ ಮದುವೆ ಮಾಡಿಕೊಟ್ಟಿದ್ದರು. ಗಣೇಶ್ ಪ್ರಸ್ತುತ ಕನಕಪುರದ ವಾಸು ಹೋಟೆಲ್ ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದು, ಕನಕಪುರದಲ್ಲಿ ಕುಟುಂಬದೊಡನೆ ವಾಸವಿದ್ದ ಎಂದು ಹೇಳಲಾಗಿದೆ.
ಒಂದೇ ಗ್ರಾಮದವರಾದ ಚಂದನ ಮತ್ತು ಸತೀಶ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಬೇರೊಬ್ಬನ ಜೊತೆ ಮದುವೆ ಮಾಡಿಕೊಟ್ಟಿದ್ದರಿಂದ ಆಕೆ ಬೇಸತ್ತಿದ್ದಳು ಎಂದು ಹೇಳಲಾಗುತ್ತಿದೆ.
ಸೆ.22 ರಂದು ಚಂದನ ಮನೆಯಿಂದ ಕಾಣೆಯಾಗಿದ್ದು, ಆಕೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ತನ್ನ ಪ್ರಿಯಕರ ಸತೀಶ್ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಬೆಟ್ಟದಲ್ಲಿ ಓಡಾಡುವ ದನಗುರಿಗಾಹಿಗಳು ಹಾಗೂ ಗ್ರಾಮಸ್ಥರಿಗೆ ಕೊಳೆತು ನಾರುತ್ತಿದ್ದ ಎರಡು ಶವಗಳ ಸುಳಿವು ಸಿಕ್ಕು ಅದನ್ನು ಹತ್ತಿರದ ಸಾತನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕನಕಪುರ ಸಿಪಿಐ ಕೃಷ್ಣ ಹಾಗು ಸಾತನೂರು ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಚಂದನಳ ತಾಯಿ ರತ್ನಮ್ಮ ತಮ್ಮ ಪುತ್ರಿ ಕಾಣೆಯಾಗಿರುವ ಬಗ್ಗೆ ಕನಕಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು