Tel: 7676775624 | Mail: info@yellowandred.in

Language: EN KAN

    Follow us :


ಪತ್ನಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತಿ

Posted date: 17 Oct, 2021

Powered by:     Yellow and Red

ಪತ್ನಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತಿ

ರಾಮನಗರ:ಕನಕಪುರ; ಅ/16/21. ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಊರ ಹೊರಗಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿಯಲ್ಲಿ ನಡೆದಿದೆ. 


ಪತಿಯಿಂದ ಹತ್ಯೆಯಾದ ಇಂದಿರಮ್ಮ (31), ದೇಸೀಗೌಡ (38) ಎಂಬಾತ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ 18 ವರ್ಷಗಳ ಹಿಂದೆ ವಿವಾಹವಾಗಿದ್ದ ದೇಸಿಗೌಡ ಮತ್ತು ಇಂದಿರಮ್ಮ ತಮ್ಮ 16 ವರ್ಷದ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ 2 ವರ್ಷಗಳ ಹಿಂದೆ ಕೊರೋನದಿಂದ ದಂಪತಿಗಳಿಬ್ಬರು ಬೆಂಗಳೂರಿನಿಂದ ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ವಾಪಸ್ಸು ಬಂದಿದ್ದರು.


ಇತ್ತೀಚೆಗೆ ಕೊರೋನ ಮುಗಿದ ಮೇಲೆ ನಗರ ವಾಸಕ್ಕೆ ಗೀಳು ಬಿದಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ವಾಪಸ್ಸು ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಗಳು ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ತಾನೇ ಸ್ವತಃ ಅಂಗಡಿಯ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದಳು. 


ಕಳೆದ 3-4 ದಿನಗಳ ಹಿಂದೆ ಮತ್ತೆ ಬೆಂಗಳೂರಿನ ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರು ಜೀವಂತವಾಗಿರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕುಯ್ದು ಕೊಲೆ ಮಾಡಿ, ತಾನು ಊರ ಹೊರಗಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವಿಷಯ ತಿಳಿದ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಟಿ.ಕೃಷ್ಣ, ಸಬ್ ಇನ್ಸ್‌ಪೆಕ್ಟರ್ ಅನಂತರಾಮು ಹಾಗೂ ಕೋಡಿಹಳ್ಳಿ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ದಾರೆ. 


ಈ ದೃಶ್ಯ ಸುತ್ತಮುತ್ತಲಿನ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑