ಐಷಾರಾಮಿ ಕಳ್ಳನನ್ನು ಬಂಧಿಸಿದ ಮಾಗಡಿ ಪೋಲಿಸರು
ರಾಮನಗರ:ಅ/26/21. ಒಂಟಿ ಮನೆಗಳನ್ನೇ ಗುರಿ ಮಾಡಿಕೊಂಡು ಕನ್ನ ಹಾಕಿ ಐಷಾರಾಮಿ ಜೀವನ ನಡೆಸುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸಿರುವ ಮಾಗಡಿ ಪೊಲೀಸರು 11 ಪ್ರಕರಣಗಳನ್ನು ಬೇಧಿಸಿ 36.5 ಲಕ್ಷ ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ತುಮಕೂರು ಜಿಲ್ಲೆ, ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ಜ್ಯೋತಿಪುರ ಗ್ರಾಮದ ರಘು (29) ಬಂಧಿತ ಆರೋಪಿ. ಈತನಿಂದ ನಗದು ಸೇರಿದಂತೆ 36.5 ಲಕ್ಷ ರುಪಾಯಿ ವೌಲ್ಯದ 805 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಕಳೆದ ಜುಲೈ 29 ರಂದು ಮಾಗಡಿ ತಾಲೂಕು ಕೆ.ವಿ.ತಾಂಡ್ಯ ಗ್ರಾಮದ ವಾಸಿ ಶಾರದಮ್ಮ ಕೂಲಿ ಕೆಲಸ ಮುಗಿಸಿಕೊಂಡು ತಮ್ಮ ಮನೆಗೆ ಹಿಂದಿರುಗಿದ್ದಾರೆ. ಮಾಂಗಲ್ಯ ಸರ ಮತ್ತು ಒಂದು ಜೊತೆ ಕಿವಿ ಓಲೆ ಯನ್ನು ಟಿವಿ ಪಕ್ಕದಲ್ಲಿ ಬಿಚ್ಚಿಟ್ಟು ಸ್ನಾನಕ್ಕೆ ಹೋದಾಗ ಕಳ್ಳರು ಒಡವೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅದೇ ರೀತಿ ಕುದೂರು, ತಾವರೆಕೆರೆ, ರಾಮನಗರ ಟೌನ್ ಹಾಗೂ ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಪತ್ತೆಗಾಗಿ ಮಾಗಡಿ ಉಪ ವಿಭಾಗದ ಉಪ ಅಧೀಕ್ಷಕ ಟಿ.ಎ.ಓಂಪ್ರಕಾಶ್ ನೇತೃತ್ವದಲ್ಲಿ ಆರಕ್ಷಕ ನಿರೀಕ್ಷಕ ಬಿ.ರವಿ ಹಾಗೂ ಪಿಎಸ್ಐಎಸ್ ಶ್ರೀಕಾಂತ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಲಾಗಿತ್ತು.
ಈ ತಂಡ ಆರೋಪಿ ರಘುನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಮಾಗಡಿ ಠಾಣೆ ವ್ಯಾಪ್ತಿಯ 3, ಕುದೂರು ಠಾಣೆಯ 4, ರಾಮನಗರ ಗ್ರಾಮಾಂತರ ಠಾಣೆಯ 2, ತಾವರೆಕೆರೆ ಹಾಗೂ ರಾಮನಗರ ಪುರ ಠಾಣೆಯ ತಲಾ 1 ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಬೀಗ ಹಾಕಿರುವ ಒಂಟಿ ಮನೆಗಳನ್ನು ಗಮನಿಸಿ ಬೀಗ ತೆಗೆದು ಅಥವಾ ಒಡೆದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಹಣ ಸಂಪಾದಿಸಿ ಐಷಾರಾಮಿ ಜೀವನ ಮಾಡುತ್ತಿದ್ದನು. ಈ ಹಿಂದೆ ತುಮಕೂರು ಜಿಲ್ಲೆಯ ಹೆಬ್ಬೂರು, ತುಮಕೂರು ಗ್ರಾಮಾಂತರ, ಕೊರಟಗೆರೆ, ಕೋರಾ, ಕೊಳಾಲ, ಕ್ಯಾತಸಂದ್ರ ಪೊಲೀಸ್ ಠಾಣೆಗಳಲ್ಲಿನ ಒಟ್ಟು 15 ಕಳ್ಳತನ ಪ್ರಕರಣ ಗಳಲ್ಲಿ ಭಾಗಿಯಾಗಿದ್ದನು. ಈತ ದಸ್ತಗಿರಿಯಾಗಿ ಕಾರಾಗೃಹದಲ್ಲಿದ್ದು, ನಂತರ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದು ಕಳ್ಳತನ ಮುಂದುವರೆಸಿದ್ದನು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ .ಗಿರೀಶ್ ನೆನ್ನೆ ಸುದ್ದಿಗೋಷ್ಠಿಯಲ್ಲಿ ಪ್ರಕರಣ ಬೇಧಿಸಿದ್ದನ್ನು ವಿವರಿಸಿ ದರಲ್ಲದೆ, ಕಾರ್ಯಾಚರಣೆ ಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ಘೋಷಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು