ಕರುಳ ಕುಡಿಯನ್ನೇ ಬೀದಿಗೆಸೆದ 'ಮಹಾತಾಯಿ !?'
ಚನ್ನಪಟ್ಟಣ:ಅ/27/21. ಮಾನವೀಯತೆಯನ್ನೇ ಮರೆತ ಹೆತ್ತತಾಯಿಯಿಬ್ಬಳು ಆಗ ತಾನೆ ಜನಿಸಿದ ತನ್ನ ನವಜಾತ ಶಿಶುವನ್ನು ಬೀದಿಗೆಸೆದ ಘಟನೆ ನಗರದ ಸಾತನೂರು ಮುಖ್ಯ ರಸ್ತೆಯಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ನಗರದ ಹೌಸಿಂಗ್ ಬೋರ್ಡ್ ಪಾರ್ಕ್ ನ ಪೊದೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಹೋಗಿದ್ದು, ಮಗು ಅಳುವ ಶಬ್ದ ಕೇಳಿಸಿಕೊಂಡ ದಾರಿಹೋಕರು ಶಿಶು ಅಭಿವೃದ್ಧಿ ಅಧಿಕಾರಿ ಮತ್ತು 112 ಪೋಲೀಸರಿಗೆ ಕರೆ ಮಾಡಿ ದೂರಿದ್ದಾರೆ.
ಶಿಶು ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಹರೀಶ್ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಮತ್ತು 112 ಪೋಲೀಸರು ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಿದ್ದಲಿಂಗಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಹರೀಶ್ ಕುಮಾರ್ ರವರು ದೂರು ದಾಖಲಿಸಿದ್ದು, ಪ್ರೊಬೆಷನರಿ ಡಿವೈಎಸ್ಪಿ ಅನುಷಾರಾಣಿ ಯವರು ಠಾಣಾ ಮೊಕದ್ದಮೆ 163/21, 317 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು