Tel: 7676775624 | Mail: info@yellowandred.in

Language: EN KAN

    Follow us :


ಪುನೀತ್ ಅಭಿಮಾನಿ ನೇಣುಬಿಗಿದು ಸಾವು

Posted date: 04 Nov, 2021

Powered by:     Yellow and Red

ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೆಂಕಟೇಶ್ ರವರು ಪುನೀತ್ ರವರ ಯಾವುದೇ ಸಿನಿಮಾ ರಿಲೀಸ್ ಆದರೂ ತಪ್ಪದೇ ಫಸ್ಟ್ ಶೋ ನೋಡುತ್ತಿದ್ದ. ಆದರೆ ಪುನೀತ್ ನಿಧನರಾದ ಬಳಿಕ ಸಂಪೂರ್ಣ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಇನ್ನು ಪುನೀತ್ ಸಮಾಧಿಗೂ ಹೋಗಬೇಕೆಂದು ಅಂದುಕೊಂಡಿದ್ದ, ಆದರೆ ಅಷ್ಟರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವನ ಸ್ನೇಹಿತರು ಮತ್ತು ಕುಟುಂಬದವರು ತಿಳಿಸಿದ್ದಾರೆ.


ಇನ್ನು ಸಾವನ್ನಪ್ಪಿದ ಬಳಿಕ ಈತನ ಸ್ನೇಹಿತರು, ಕುಟುಂಬಸ್ಥರು ಸೇರಿ ನೇತ್ರದಾನ ಮಾಡಿಸಿದ್ದಾರೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೇತ್ರ ಕಸಿ ಮಾಡಿದ ವೈದ್ಯರು ಯುವಕನ ಎರಡೂ ಕಣ್ಣನ್ನ ಕಸಿ ಮಾಡಿದ್ದಾರೆ. ಡಾ.ರಾಜಕುಮಾರ್ ನೇತ್ರ ಸಂಗ್ರಹಣ ಕೇಂದ್ರದವರು ಯುವಕನ ಕಣ್ಣುಗಳನ್ನು ಸಂಗ್ರಹ ಮಾಡಿಕೊಂಡಿದ್ದಾರೆ. ಶಂಕರ್ ಆಸ್ಪತ್ರೆಯಲ್ಲಿ ಕಣ್ಣುಗಳನ್ನ ಲ್ಯಾಬ್ ನಲ್ಲಿ ಇಡಲಾಗುತ್ತೆ ಎಂದರು.


ಇನ್ನು ಯಾರು ಸಹ ಇಂತಹ ಕೆಲಸಗಳನ್ನ ಮಾಡಿಕೊಳ್ಳಬೇಡಿ. ಯಾರು ಸಹ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಶಿವರಾಜ್ ಕುಮಾರ್ ರವರು ಮಾಧ್ಯಮದ ಮೂಲಕ ಮನವಿ ಮಾಡಿಕೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑