Tel: 7676775624 | Mail: info@yellowandred.in

Language: EN KAN

    Follow us :


ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

Posted date: 19 Nov, 2021

Powered by:     Yellow and Red

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ ಯವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನುಸೂಯಮ್ಮ ನವರು ಅಭಿಪ್ರಾಯ ಪಟ್ಟರು. ಅವರು ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.  ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿಯಾದ ಪಾರ್ವತೀಶ ಬಿಳಿದಾಳೆಯ ವರು, ನಾಡು ನುಡಿಯ ಪರ ಹೋರಾಟ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ, ಕಾರ್ಮಿಕರು ಹಾಗೂ ದಲಿತಪರ ಸಂವೇದನೆಯನ್ನು ಹೊಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಇವರನ್ನು ಸಾಹಿತ್ಯ ಪರಿಷತ್ತಿಗೆ ಆಯ್ಕೆ ಮಾಡುವುದರಿಂದ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚುತ್ತದೆ ಎಂದು ಹೇಳಿದರು.


ಇತಿಹಾಸ ಉಪನ್ಯಾಸಕರಾದ ಡಾ.ಚಿಕ್ಕಚೆನ್ನಯ್ಯ ಮಾತನಾಡಿ, ಸಾಹಿತ್ಯಿಕ ಕ್ಷೇತ್ರದಲ್ಲಿ ಸಮಾನತೆಯ ಆಶಯ ಹಾಗೂ ಸಾಹಿತ್ಯಿಕ ಪ್ರೀತಿ ಬಹಳ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾರ್ವತೀಶ ಬಿಳಿದಾಳೆಯವರನ್ನು ಆಯ್ಕೆ ಮಾಡಿ, ರಾಜ್ಯ ಮಟ್ಟದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಲು ಹೋರಾಟ ಮಾಡಿ, ಸಾಹಿತ್ಯ ಕೃತಿಗಳನ್ನು ಪ್ರಕಟಿಸಿರುವ ಇವರನ್ನು ಪರಿಷತ್ತಿಗೆ ಆಯ್ಕೆ ಮಾಡಲು ಭಿನ್ನವಿಸಿದರು.


ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪಾರ್ವತೀಶ್ ಬಿಳಿದಾಳೆ ಮಾತನಾಡಿ, ನವೆಂಬರ್ ೨೧ರಂದು ನಡೆಯುವ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದರೆ, ಸಾಹಿತ್ಯ ಪರಿಷತ್ತಿನಲ್ಲಿ ಹೊಸ ಚಿಂತನೆಗಳು ಹಾಗೂ ಬದಲಾವಣೆ ಅಪೇಕ್ಷಿಸುವ ಸದಸ್ಯರ ಆಶಯವನ್ನು ಈಡೇರಿಸುವುದಾಗಿ, ಅಲ್ಲದೆ ರಚನಾತ್ಮಕ ಕೆಲಸ ಮಾಡುವುದಾಗಿ ಹೇಳಿದರು.

ನಾನು ಜಿಲ್ಲಾ ಕಸಾಪ ಅಧ್ಯಕ್ಷನಾಗಿ ಆಯ್ಕೆಯಾದರೆ ಹಣಕಾಸಿನ ವಿಚಾರದಲ್ಲಿ ಶಿಸ್ತು ಮತ್ತು ಪಾರದರ್ಶಕತೆಯನ್ನು ಕಾಪಾಡುವುದಾಗಿ, ಕನ್ನಡ ಕಟ್ಟುವ ಹಿತಾಸಕ್ತಿಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿ ಜಿಲ್ಲಾ ಕಸಾಪವನ್ನು ಮಾದರಿ ಯಾಗಿಸುವ ತುಡಿತವಿದೆ, ಹಾಗಾಗಿ ನನ್ನನ್ನು ಆಯ್ಕೆ ಮಾಡಿ ಎಂದರು.


ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಎನ್.ಸಿದ್ದೇಗೌಡ, ಬೆಂಗಳೂರು ವಿವಿ  ಸಿಂಡಿ ಕೇಟ್ ಮಾಜಿ ಸದಸ್ಯ ಬಿ.ಶಿವಣ್ಣ, ರಾಮ ಮನೋಹರ ಲೋಹಿಯಾ ಅಧ್ಯಯನ ಕೇಂದ್ರದ ಶ್ರೀನಿವಾಸ್ ಕರಿಯಪ್ಪ, ಜನಮುಖಿ ಟ್ರಸ್ಟಿನ ಕುಂಬಾಪುರ ಬಾಬು ಸೇರಿದಂತೆ ಹಲವರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑