Tel: 7676775624 | Mail: info@yellowandred.in

Language: EN KAN

    Follow us :


ದೈಹಿಕವಾಗಿ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅತ್ಯಮುಖ್ಯ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್

Posted date: 03 Dec, 2021

Powered by:     Yellow and Red

ದೈಹಿಕವಾಗಿ ಮತ್ತು ಮಾನಸಿಕ ಸದೃಢತೆಗೆ  ಕ್ರೀಡೆ ಅತ್ಯಮುಖ್ಯ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್

ಚನ್ನಪಟ್ಟಣ.ಡಿ.೦೩: ದೈಹಿಕವಾಗಿ ಮತ್ತು ಮಾನಸಿಕವಾಗಿ ಎರಡರಲ್ಲಿಯೂ ಸದೃಢವಾಗಿರಬೇಕು ಎಂದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಮುಖ್ಯ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ತಿಳಿಸಿದರು..

ಅವರು ಇಂದು ಇಲ್ಲಿನ ಡಿಎಆರ್ ಮೈದಾನದಲ್ಲಿ ಪೊಲೀಸರಿಗಾಗಿಯೇ ನಡೆಸುವ ಪೊಲೀಸ್ ಕ್ರಿಡಾ ಕೂಟವನ್ನು ಶಾಂತಿಯ ಸಂಕೇತ ಪಾರಿವಾಳ ಹಾಗೂ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾಧಿಕಾರಿಯಾದ ರಾಕೇಶ್ ಕುಮಾರ್ ‌ಕೆ ಹಾಗೂ ಜಿಲ್ಲಾ ಎಸ್ಪಿ ಗಿರೀಶ್ ಅವರು ಉದ್ಘಾಟಿಸಿ ಮಾತನಾಡಿದರು.


ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು, ಕ್ರೀಡೆಯನ್ನು ಪಠ್ಯೇತರ ಚಟುವಟಿಕೆಯಾಗಿ ಅಭ್ಯಾಸ ಮಾಡಬೇಕು.  ಪಠ್ಯಕ್ರಮದ ಭಾಗವಾಗಿ ಮಾಡಲು ಪ್ರಯತ್ನ ಮಾಡುವ ಬದಲು ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಬೇಕು, ಅದಕ್ಕೆ ನಾವು ಪ್ರತಿನಿತ್ಯ ಕ್ರೀಡೆಯಲ್ಲಿ ಭಾಗವಹಿಸುವುದನ್ನು ಮಾಡಬೇಕು. ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಹವರು ಅದರಲ್ಲೂ ದಿನದ ಇಪ್ಪತ್ನಾಲ್ಕು ಗಂಟೆಗಳು ಕೆಲಸ ಮಾಡುವಂತಹವರು ಕ್ರೀಡೆಯಲ್ಲಿ ಪಾಲ್ಗೊಂಡರೆ ದೇಹ ಮತ್ತು ಮನಸ್ಸು ಸದೃಢವಾಗುತ್ತದೆ ಎಂದರು.

ಈ ವಾರ್ಷಿಕ ಕ್ರೀಡಾ ಕೂಟದ ಉದ್ದೇಶ, ವರ್ಷಪೂರ್ತಿ ಕಲಿತಿರುವ ಕ್ರೀಡೆಯನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಪ್ರೋತ್ಸಾಹಿಸಲು ಹಾಗೂ ಕ್ರೀಡೆಯಿಂದ ಹೊರಬರುವ ನಿಮ್ಮ ಪ್ರತಿಭೆಯನ್ನು ಹೊರ ಹಾಕಲು ಈ ಕ್ರೀಡಾ ಕೂಟ ಸಹಕಾರಿಯಾಗಲಿದೆ ಎಂದರು.


ವೈಯುಕ್ತಿಕ ಕ್ರೀಡೆಯಲ್ಲಿ ಸಾಧನೆಗೈದ ಮನ್ಸೂರ್ ರವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಹಸ್ತಾಂತರಿಸಿದರು.

ಡಿಎಆರ್ ಪೋಲೀಸ್ ತಂಡ, ಮಹಿಳಾ ಪೋಲೀಸ್ ತಂಡ ಸೇರಿದಂತೆ ಒಟ್ಟು ಆರು ತಂಡಗಳು ಪಥಸಂಚಲನ ನಡೆಸಿದರು. ಡಿಸಿ ಮತ್ತು ಎಸ್ಪಿ ಯವರು ಗುಂಡು ಎಸೆಯುವ ಮೂಲಕ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.


ಕಾರ್ಯಕ್ರಮದಲ್ಲಿ ಚನ್ನಪಟ್ಟಣ-ಕನಕಪುರ ಡಿವೈಎಸ್ಪಿ ಕೆ ಎನ್ ರಮೇಶ್, ರಾಮನಗರ ಡಿವೈಎಸ್ಪಿ ಮೋಹನ್ ಕುಮಾರ್, ಮಾಗಡಿ ಡಿವೈಎಸ್ಪಿ ಓಂಪ್ರಕಾಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವೃತ್ತನಿರೀಕ್ಷಕರು, ಉಪ ನಿರೀಕ್ಷಕರು, ಕ್ರೀಡಾಪಟುಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑