ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ
ಚನ್ನಪಟ್ಟಣ (ಏ.30):-- ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಚುನಾವಣೆ 2023ರ ಅಂಗವಾಗಿ ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ರಾಂಪುರ ಗ್ರಾಮ ಪಂಚಾಯಿತಿ ಮತ್ತು ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಸ್ವೀಪ್ ಕಮಿಟಿ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ "ನಮ್ಮ ನಡೆ ಮತಗಟ್ಟೆಯ ಕಡೆ"ಎಂಬ ಕಾರ್ಯಕ್ರಮವನ್ನು ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾ ವಿಧಿ ಭೋದಿಸುವ ಮೂಲಕ ಹಮ್ಮಿಕೊಳ್ಳಲಾಗಿತ್ತು.
ನಂತರ ಚನ್ನಪಟ್ಟಣ ತಾಲ್ಲೂಕಿನ ಚುನಾವಣಾಧಿಕಾರಿ ಮುನೇಗೌಡ ರವರು ಮಾತನಾಡಿ ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೆ ಎಲ್ಲರು ಪಾರದರ್ಶಕತೆಯಿಂದ ಮತದಾನ ಮಾಡಿ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಿ ಎಂಬ ಉದ್ದೇಶದಿಂದ ಮತದಾನ ಜಾಗೃತಿ ನಮ್ಮ ನಡೆ ಮತಗಟ್ಟೆಗಳ ಕಡೆಗೆ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರತಿ ಮತಗಟ್ಟೆಗಳ ಬಳಿ ರಾಷ್ಟ್ರೀಯ ಹಬ್ಬದ ರೀತಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಸ್ವೀಪ್ ಅಧಿಕಾರಿ ಶಿವಕುಮಾರ್ ಮಾತನಾಡಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳುವುದರ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರನ್ನು ಓಟರ್ ಹೆಲ್ಪ್ ಲೈನ್ ಆಪ್ ಪರಿಶೀಲಿಸಿಕೊಳ್ಳುವ ಬಗ್ಗೆ, ಯಾವುದೇ ಅಕ್ರಮ ಕಂಡುಬಂದಲ್ಲಿ cvigil app_ 1950 ಉಚಿತ ಸಹಾಯವಾಣಿಗೆ ಕರೆ ಮಾಡಿ ಅಥವಾ ದೂರು ದಾಖಲಿಸುವ ಬಗ್ಗೆ ಮಾಹಿತಿಯನ್ನು ಸರಳವಾದ ರೀತಿಯಲ್ಲಿ ವಿವರಿಸಿ ಅರ್ಥೈಸಿದರು. ಜೊತೆಗೆ ಯಾವುದೇ ಆಸೆ ಆಮೀಷಗಳಿಗೆ ಒಳಗಾಗಿ ಮತದಾನ ಮಾಡಿದರೆ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ವಂದಾರಗುಪ್ಪೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕ್ ಜಾಥಾ ಹೋಗುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, NLRM ಶಾಖೆಯ ಸಿಬ್ಬಂದಿಗಳಾದ, ವಿ ಹರೀಶ್ ಬಾಬು, ತೇಜು, ಹೇಮಂತ ಕುಮಾರ್ ಎನ್, ಆನಂದ್ ವಿ,
ತಾಲ್ಲೂಕು IEC ಸಂಯೋಜಕಿ ಭವ್ಯ, ಸ್ವ- ಸಹಾಯ ಸಂಘದ ಮಹಿಳೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು