Tel: 7676775624 | Mail: info@yellowandred.in

Language: EN KAN

    Follow us :


ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ

Posted date: 12 May, 2023

Powered by:     Yellow and Red

ಮತದಾನ ಪ್ರಮಾಣ ಹೆಚ್ಚಳಕ್ಕೆ ವಿನೂತನ ತಂತ್ರ! ಮಾಡಲಗಿತ್ತು ಜಿಪಂ ಸಿಇಓ

ರಾಮನಗರ: ಪ್ರಜಾತಂತ್ರ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ವಿಇಇಪಿ) ಸಮಿತಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಫಲವಾಗಿ ರಾಮನಗರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಶೇ. 85.04 ದಾಟಿದೆ.

ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳ ಮಾಹಿತಿ ಪಡೆದ ಸಮಿತಿಯ ಅಧಿಕಾರಿಗಳು, ಅದೇ ಭಾಗದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. 

ಅದರಂತೆ ಬೂತ್ ಹಂತದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಮಹತ್ವವನ್ನು ಜನರಿಗೆ ತಿಳಿಸುವುದು ಹಾಗೂ ಆ ಮೂಲಕ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯದಂತೆ ಅರಿವು ಮೂಡಿಸಲಾಯಿತು.


2013 ಹಾಗೂ 2018ರ ವಿಧಾನ ಸಭಾ ಚುನಾವಣೆಯಲ್ಲೂ ಶೇ.80 ಕ್ಕೂ ಅಧಿಕ ಮತದಾನ ದಾಖಲಾಗಿತ್ತು, ಈ ಬಾರಿಯ ಪ್ರಜಾ ಪ್ರಭುತ್ವ ಹಬ್ಬದಲ್ಲಿ ಹಿರಿಯ ಹಾಗೂ ಕಿರಿಯ ಮತದಾರರು ಉತ್ಸಾಹದಿಂದ ಭಾಗಿಯಾದರು. ನಡೆಯಲು ಸಾಧ್ಯವಾಗದ ವಯೋವೃದ್ಧರು, ಅಂಗವಿಕಲರು ತಮ್ಮ ಜವಾಬ್ದಾರಿ ಮರೆಯಲಿಲ್ಲ. ಇವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ಇದ್ದರೂ ಹೆಚ್ಚಿನವರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ಇದಕ್ಕೆ ಪ್ರೇರಣೆ ನೀಡುವಂತೆ ಜಿಲ್ಲೆಯ ವಿವಿದೆಡೆ  ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸಖಿ ಮತಗಟ್ಟೆಗಳು ಅಲ್ಲದೇ ವಿಕಲಚೇತನರ ಸ್ನೇಹಿ, ಯುವ ಮತದಾರ ಸ್ನೇಹಿ ಮತಗಟ್ಟೆ ಕೇಂದ್ರ ಸ್ಥಾಪಿಸಲಾಗಿತ್ತು. ಕಳೆದ ಚುನಾವಣೆಗಿಂತ ಈ ಬಾರಿ ಮತದಾರರ ಸಂಖ್ಯೆ ಹೆಚ್ಚಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರಯತ್ನದ ಜೊತೆಗೆ ಈ ಭಾಗದ ಮತದಾರರು ತಮ್ಮ ಜವಾಬ್ದಾರಿ ಮೆರೆದು ಹಕ್ಕು ಚಲಾಯಿಸಿದ್ದಾರೆ. ಅದಕ್ಕೆ ಮತದಾರರನ್ನು ಅಭಿನಂದಿಸುತ್ತೇನೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ದಿಗ್ವಿಜಯ್ ಬೋಡ್ಕೆ ತಿಳಿಸಿದರು.


*ವಿನೂತನ ರೀತಿಯ ಜಾಗೃತಿ!*:

ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಹಾಗೂ ಮತಗಟ್ಟೆ ಕೇಂದ್ರಗಳ ಹಂತಗಳಲ್ಲಿ ಸಾಕಷ್ಟು  ಸ್ವೀಪ್ ಕಾರ್ಯಕ್ರಮಗಳಾದ ರಂಗೋಲಿ ಸ್ಪರ್ಧೆಯನ್ನು ಸ್ವಸಹಾಯ ಸಂಘಗಳ, ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ವಿಶೇಷ ಚೇತನರ ಮತ್ತು ಹಿರಿಯ ನಾಗರೀಕರ  ಸಬಲೀಕರಣ ಇಲಾಖೆಯ ಸಹ ಭಾಗಿತ್ವದಲ್ಲಿ 100 ಕ್ಕೂ ಹೆಚ್ಚು ವಿಶೇಷಚೇತನರು ತಮ್ಮ ತ್ರಿಚಕ್ರ ವಾಹನದಲ್ಲಿ ನಗರಗಳ ಪ್ರತಿಷ್ಟಿತ ರಸ್ತೆಗಳಲ್ಲಿ ಜಾಥಾ ಮಾಡುವ ಮೂಲಕ ಮತದಾರರಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇವಿಎಂ ವಿವಿಪ್ಯಾಟ್ ಡೆಮೋ ನಡೆಸುವ ಮೂಲಕ,  ಸೆಲ್ಫಿ ಸ್ಟ್ಯಾಂಡ್,  ಪಂಜಿನ ಮೆರವಣಿಗೆ, ಕಾಲೇಜು ವಿದ್ಯಾರ್ಥಿಗಳ ಮೂಲಕ ಮೆರವಣಿಗೆ, ಸರ್ಕಾರಿ ಅಧಿಕಾರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ, ಬೈಕ್ ಜಾಥಾ ಸೇರಿದಂತೆ ಇತರೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಮತದಾನದ ಕುರಿತು ಅರಿವು/ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.


*ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ:*

ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಮತ, ನಮ್ಮ ಭವಿಷ್ಯ ಘೋಷಣೆಯಿರುವಂತಹ ಸ್ಟಿಕ್ಕರ್ ಅಂಟಿಸಲು ಯೋಜನೆ ರೂಪಿಸಿದ್ದು, ಸ್ವಚ್ಛ ವಾಹಿನಿಗಳ ಮೂಲಕ ಜಾಗೃತಿ ಮೂಡಿಸುವುದು, ಬೂತ್ ಮಟ್ಟದಲ್ಲಿ ಜಾಥಾ, ಕ್ಯಾಂಡಲ್ ನಡಿಗೆ, ಬೀದಿ ನಾಟಕ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಡೆಸಲಾಯಿತು.


*ಜಿಲ್ಲೆಯಾದ್ಯಂತ ಮೂರು ತಿಂಗಳಿನಿಂದ ವಿನೂತನ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ, ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಬೂತ್ ಗಳಲ್ಲಿ ವಿಭಿನ್ನ ಪ್ರಯೋಗ ನಡೆಸಿದ್ದೆವು, ವಿವಿಧ  ಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಮತದಾನದ ಅರಿವು ಮೂಡಿಸಲಾಯಿತು. ಕಳೆದ ಚುನಾವಣೆಗಿಂತ ಈ ಬಾರಿ ಮತದಾರರ ಸಂಖ್ಯೆ ಹೆಚ್ಚಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರಯತ್ನದ ಜೊತೆಗೆ ಈ ಭಾಗದ ಮತದಾರರು ತಮ್ಮ ಜವಾಬ್ದಾರಿ ಮೆರೆದು ಹಕ್ಕು ಚಲಾಯಿಸಿದ್ದಾರೆ. ಅದಕ್ಕೆ ಮತದಾರರನ್ನು ಅಭಿನಂದಿಸುತ್ತೇನೆ.*

*- ದಿಗ್ವಿಜಯ್ ಬೋಡ್ಕೆ,* 

ಅಧ್ಯಕ್ಷರು ಜಿಲ್ಲಾ  ಸ್ವೀಪ್ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್, ರಾಮನಗರ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑