Tel: 7676775624 | Mail: info@yellowandred.in

Language: EN KAN

    Follow us :


ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

Posted date: 22 May, 2023

Powered by:     Yellow and Red

ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

ಚನ್ನಪಟ್ಟಣ: ತಾಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿ ಬೆಂಗಳೂರು ಸೌತ್ ಎಂಡ್ ಸರ್ಕಲ್ ನ ಬಸವನಗುಡಿಯ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಎನ್‌ಎಸ್‌ಎಸ್ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಗ್ರಾಮೀಣ ಭಾಗದಲ್ಲಿ ಚರಂಡಿ‌ ಹಾಗೂ ಗ್ರಾಮದ ರಸ್ತೆಗಳು,‌ ಶಾಲೆಯ ಆವರಣ, ಕಾಲೇಜು ಆವರಣವನ್ನು ಸ್ವಚ್ಛ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.


ಇದೇ ವೇಳೆ ಸಹಾಯಕ ಪ್ರಾಧ್ಯಾಪಕರಾದ ಶ್ರೀನಿವಾಸ್. ಎಸ್ ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯವನ್ನು ಮಾಡುತ್ತಿದ್ದಾರೆ.‌ ನಗರದ ಭಾಗದಲ್ಲಿ ಬೆಳೆದ ಮಕ್ಕಳು ಮನೆಯಲ್ಲಿ ಆರಾಮಾವಾಗಿದ್ದರು.‌ ಅವರಿಗೆ ಗ್ರಾಮೀಣ ಭಾಗದಲ್ಲಿರುವ ಸಂಪ್ರದಾಯ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಜನರ ಜೊತೆಗೆ ಬೆರೆಯುವ ಕೆಲಸವನ್ನು ಎನ್‌‌ಎಸ್‌ಎಸ್ ಶಿಬಿರದಲ್ಲಿ ಮಾಡಿಸಲಾಗುತ್ತಿದೆ ಎಂದರು.


ಮತ್ತೊಬ್ಬ ಸಹಾಯಕ ಪ್ರಾಧ್ಯಾಪಕರಾದ ನರೇಶ್ ಮಾತನಾಡಿ 70 ಮಂದಿ ನಾವು ಶೆಟ್ಟಿಹಳ್ಳಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿಗಳಿಗೆ ಈ ಮೂಲಕ ಸ್ವಚ್ಚತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಅತ್ಯುತ್ಸಾಹದಲ್ಲಿ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಹಳ ಶ್ರದ್ಧೆಯಿಂದ ಸ್ವಚ್ಛತೆ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ಇರುವ ಸೌಲಭ್ಯಗಳನ್ನು ‌ಬಿಟ್ಟು ಗ್ರಾಮೀಣ ಭಾಗದಲ್ಲಿರುವ ಜನರ ಒಡನಾಟವನ್ನು ಇಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

 

ಇದೇ ವೇಳೆ ಸಹಾಯಕ ಪ್ರಾಧ್ಯಾಪಕರಾದ ಅಶೋಕ್ ಮಾತನಾಡಿ ಮತ್ತೀಕೆರೆ ಹಾಗೂ ಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು ಸದಸ್ಯರು ಸಹ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡುತ್ತಿದ್ದಾರೆ ಬಹಳ ಖುಷಿಯಾಗಿದೆ ಎಂದರು. ಏಳು ದಿನಗಳ ಈ ಎನ್‌ಎಸ್‌ಎಸ್ ಕ್ಯಾಂಪ್‌ನಲ್ಲಿ ಗ್ರಾಮದಲ್ಲಿ ಇರುವ ಅನೈರ್ಮಲ್ಯತೆಯನ್ನು ತೊಡೆದು ಹಾಕಿ ನೈರ್ಮಲ್ಯ ಕಾಪಾಡಿ ಚರಂಡಿ, ಶಾಲೆಯ ಆವರಣ, ಕಾಲೇಜು ಆವರಣವನ್ನು ಸ್ವಚ್ಛ ಮಾಡಿಸಲಾಗುತ್ತದೆ‌. ಜನರಲ್ಲಿ ಸ್ವಚ್ಛತೆಯ‌ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.


ಸುರಾನ ಕಾಲೇಜಿನ ವಿದ್ಯಾರ್ಥಿ ಸಾಗರ್ ಮಾತನಾಡಿ ನಾವು ಬೆಂಗಳೂರಿನಿಂದ ಬಂದಿದ್ದು ಎಲ್ಲರೂ ಸೇರಿ ಸ್ವಚ್ಛತೆಯನ್ನು ಮಾಡುವುದರ ಜೊತೆಗೆ ಗ್ರಾಮದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ವಿದ್ಯಾರ್ಥಿನಿ ಸಹನಾ ಮಾತನಾಡಿ ಪ್ರತಿನಿತ್ಯ ಪೌರಕಾರ್ಮಿಕರು ನಮಗಾಗಿ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾರೆ ಅವರು ಇಲ್ಲದಿದ್ದರೆ ಎಲ್ಲೆಡೆ ಅನೈರ್ಮಲ್ಯತೆ ತುಂಬಿ ತುಳುಕುತ್ತಿತ್ತು. ಅವರೊಂದಿಗೆ ನಾವು ಸಹ ಕೈ ಜೋಡಿಸುತ್ತಿದ್ದೇವೆ.‌ ನಮ್ಮಲ್ಲಿ ಸೇವಾ ಮನೋಭಾವ ಬೆಳೆದಾಗ ಎಲ್ಲರಿಗೂ ಸಹ ಸಹಾಯ ಮಾಡುವ ಗುಣ ಬರುತ್ತದೆ. ‌ನಾವು ಮೊದಲು ಸೇವಾ ಮನೋಭಾವವನ್ನು ಬೆಳಸಿಕೊಳ್ಳಬೇಕು ಎಂದರು.


 ಇದೇ ಸಂದರ್ಭದಲ್ಲಿ ಊರಿನ ಗ್ರಾಮಸ್ಥರು, ಎನ್‌ಎಸ್‌ಎಸ್‌ ಕ್ಯಾಂಪ್‌‌ನ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು, ಸಹಾಯಕ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑