Tel: 7676775624 | Mail: info@yellowandred.in

Language: EN KAN

    Follow us :


ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

Posted date: 10 Oct, 2023

Powered by:     Yellow and Red

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘವು ಜನರ ಬದುಕು ಹಸನಾಗಲು ಶ್ರಮಿಸುತ್ತಿದೆ ಜಯಕರಶೆಟ್ಟಿ

ಚನ್ನಪಟ್ಟಣ: ಧರ್ಮಸ್ಥಳ ಎಂದರೆ ಅದೊಂದು ಧಾರ್ಮಿಕ ಕೇಂದ್ರ, ಪ್ರತಿ ಕ್ಷಣವೂ ಧರ್ಮವನ್ನೇ ಉಸಿರಾಗಿಸಿಕೊಂಡಿರುವ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಹೆಗ್ಗಡೆಯವರು ಕೇವಲ ಧರ್ಮಸ್ಥಳದಲ್ಲಿ ಮಾತ್ರ ಧರ್ಮ ಇದ್ದರೆ ಸಾಲದು, ಅದು ಪ್ರತಿ ಜನರಿಗೂ ತಲುಪಬೇಕು ಎಂಬ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಜಾರಿಗೆ ತಂದು ಬಡವರ ಪಾಲಿನ ದೇವರಾಗಿದ್ದಾರೆ, ಎಲ್ಲಾ ರೀತಿಯ ಕೆಲಸ ಮಾಡುವ ಜನರಿಗೂ ಅವರಿಷ್ಟದ ಬದುಕು ಸಾಗಿಸಲು ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ನಮ್ಮ ಸಂಘ ಸಂಸ್ಥೆಗಳ ಮೂಲಕ ತಲುಪಿಸುತ್ತಿದ್ದೇವೆ. ಗ್ರಾಮೀಣ ಜನರ ಬದುಕನ್ನು ಹಸನಾಗಿಸಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಎಂಟು ವರ್ಷಗಳಿಂದ ತಾಲೂಕಿನ ಜನರ ಬದುಕನ್ನು ಪರಿವರ್ತಿಸಲು ಸಾಕಷ್ಟು ಕೊಡುಗೆ ನೀಡಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಜಯಕರ್ ಶೆಟ್ಟಿ ತಿಳಿಸಿದರು.


ನಗರದಲ್ಲಿನ ಸಂಸ್ಥೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪರಂಪರೆಯಂತೆ ಅನ್ನದಾನ, ವಿದ್ಯಾದಾನ, ಆರೋಗ್ಯದಾನ ಹಾಗೂ ಅಭಯದಾನದಂಥ ಚತುರ್ದಾನಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದು ಸ್ಥಳೀಯವಾಗಿಯೂ ಭಿನ್ನವಾದ ಯೋಜನೆಗಳನ್ನು ತಂದಿದ್ದಾರೆ ಎಂದರು.


ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ತಾಲೂಕಿನಲ್ಲಿ ಸುಮಾರು 110 ಸೇವಾ ಕಾರ್ಯಕರ್ತರು ಜನಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರು, ಯೋಜನಾಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಸ್ವಸಹಾಯ ಸಂಘ ಚಳುವಳಿ, ಮನೆ ಬಾಗಿಲಿಗೆ ಬ್ಯಾಂಕಿಂಗ್ ವ್ಯವಸ್ಥೆ, ಮಹಿಳಾ ಸ್ವಾವಲಂಬನೆ, ಕೃಷಿ ಅಭಿವೃದ್ಧಿ ಕಾರ್ಯಕ್ರಮ, ನಮ್ಮೂರೂ ನಮ್ಮ ಕೆರೆ, ವಿಮಾ ಸೌಲಭ್ಯ ಯೋಜನೆ, ಹಸಿರು ಇಂಧನ ಕಾರ್ಯಕ್ರಮ, ಮಾಸಾಶನ ಹಾಗೂ ಶಿಷ್ಯ ವೇತನ ಕಾರ್ಯಕ್ರಮ, ವಾತ್ಸಲ್ಯ ಕಾರ್ಯಕ್ರಮ, ಸ್ವ-ಉದ್ಯೋಗ, ಶ್ರದ್ಧಾ ಕೇಂದ್ರಗಳ ಶುಚಿತ್ವ ಅಭಿಯಾನ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗಿದೆ ಎಂದು ತಿಳಿಸಿದರು.


ದುರ್ಬಲ ವರ್ಗದವರು, ಕೃಷಿಕರು, ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ 2676 ಸಂಘಗಳನ್ನು ರಚನೆ ಮಾಡಲಾಗಿದೆ. ಸಂಘದಲ್ಲಿ 21,591 ಸದಸ್ಯರಿದ್ದು, 10ಕೋಟಿ 9ಲಕ್ಷ ರೂ.ಹಣ ಉಳಿತಾಯ ಮಾಡಿದ್ದು, ಬ್ಯಾಂಕ್‍ನಲ್ಲಿ ಜಮಾ ಮಾಡಲಾಗಿದೆ. ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಯಲ್ಲಿ 50,355 ಸದಸ್ಯರಿಗೆ 25,557 ಕೋಟಿ ವಿಮಾ ಸೌಲಭ್ಯ, ಮೈಕ್ರೋಬಚತ್ ವಿಮಾ ಯೋಜನೆಯಲ್ಲಿ 5300 ಪಾಲಿಸಿಗಳನ್ನು ಮಾಡಿಸಲಾಗಿದೆ ಎಂದರು.  


18 ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಗ್ರಂಥಾಲಯ ಕಟ್ಟಡ, ಶಾಲೆಗಳಿಗೆ ಪೀಠೋಪಕರಣ, ಸಮುದಾಯ ಭವನ, 12 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಇದಲ್ಲದೇ 46 ವಿಶೇಷ ಚೇತನರಿಗೆ ವೀಲ್ ಚೇರ್, ವಾಕರ್, ವಾಟರ್ ಬೆಡ್, ಗಂಭೀರ ಅನಾರೋಗ್ಯ ಸಮಸ್ಯೆಗಳ ಯೋಜನೆಯಿಂದ 14ಮಂದಿಗೆ ಆರ್ಥಿಕ ಸಹಾಯ ಮಾಡಲಾಗಿದೆ.


ಹಸಿರು ಇಂಧನ ಕಾರ್ಯಕ್ರಮದಲ್ಲಿ 1586 ಕುಟುಂಬಗಳಿಗೆ ಸೋಲಾರ್ ಘಟಕ ಅಳವಡಿಕೆ, 2910 ಕುಟುಂಗಳಿಗೆ ಗ್ರೀನ್ ವೇ ಕುಕ್‍ಸ್ಟವ್, 215 ಮಂದಿಗೆ ಮಾಸಾಶನ, 106 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ. 300 ಕುಟುಂಬಗಳು ಸ್ವಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳಲು ತರಬೇತಿ ನೀಡಲಾಗಿದ್ದು, ಸ್ವಚ್ಛತಾ ಅಭಿಯಾನದ ಮೂಲಕ ಸುಮಾರು 250 ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಗಿದೆ. ಮದ್ಯವರ್ಜನ ಶಿಬಿರ ಮೂಲಕ 250 ಮಂದಿಯನ್ನು ಪಾನಮುಕ್ತರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೇಶ್ಮಾ ಎಸ್.ಉಪಸ್ಥಿತರಿದ್ದರರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑