ಮಳೆಗಾಳಿಗೆ ಮುರಿದು ಬಿದ್ದ ವಿದ್ಯುತ್ ಕಂಬಗಳು
ಚನ್ನಪಟ್ಟಣ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಒಂದು ಮರ ಹಾಗೂ ನಾಲ್ಕು ವಿದ್ಯುತ್ ಕಂಬ ಧರೆಗುರುಳಿದ್ದು, ಹತ್ತು ಕಂಬಗಳು ಬಾಗಿ ನಿಂತು ಪ್ರಯಾಣಿಕರು ಜೀವ ಕೈಯ್ಯಲಿಡಿದು ಓಡಾಡಿದ ಘಟನೆ ತಾಲೂಕಿನ ನೀಲಸಂದ್ರ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ರಾತ್ರಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಸಾತನೂರು ಮುಖ್ಯ ರಸ್ತೆ ಹಾಗೂ ನೀಲಸಂದ್ರ ಗ್ರಾಮದ ರಸ್ತೆಯಲ್ಲಿ ನಾಲ್ಕು ವಿದ್ಯುತ್ ಕಂಬಗಳು ಹಾಗೂ ಒಂದು ಮರ ಧರೆಗುರಿಳಿದೆ. ಈ ವೇಳೆ ಸುಮಾರು 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳ ತಂತಿ ಕಳಚಿ ಬಿದ್ದಿದ್ದು, ವಿದ್ಯುತ್ ಕಂಬಗಳು ವಾಲಿ ನಿಂತಿವೆ.
ವಿದ್ಯುತ್ ತಂತಿಗಳು ಹಾಗೂ ಕಂಬಗಳು ರಸ್ತೆಯ ಮೇಲೆ ಬಿದ್ದಿವೆ. ಈ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬುಧವಾರ ಬೆಳಗ್ಗೆ ಬೆಸ್ಕಾಂ ಅಧಿಕಾರಿ ಚಿದಾನಂದ ನೇತೃತ್ವದಲ್ಲಿ ಹಲವಾರು ನೌಕರರು ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ದಾರಿ ಸುಗಮ ಮಾಡಿಕೊಟ್ಟರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು