Tel: 7676775624 | Mail: info@yellowandred.in

Language: EN KAN

    Follow us :


ಡಾ ರಾಜಕುಮಾರ್ ಗೆ ಪಿತೃವಿಯೋಗ

Posted date: 26 Nov, 2023

Powered by:     Yellow and Red

ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ, ವೈದ್ಯರು, ದಾದಿಯರು, ಸಿಬ್ಬಂದಿಗಳು ಸೇರಿದಂತೆ ತಾಲ್ಲೂಕಿನಾದ್ಯಂತ ಇರುವ ಡಾ ರಾಜಕುಮಾರ್ ರವರ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.


ಮೂಲತಃ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮುಪ್ಪೇನಹಳ್ಳಿ ಗ್ರಾಮದ ರೇಣುಕಪ್ಪ ರವರು ಬೆಂಗಳೂರಿನ ಬಿಹೆಚ್ಇಎಲ್ ನಲ್ಲಿ ಕೆಲಸ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಅವರು ಬೆಂಗಳೂರಿನಲ್ಲಿ ವಾಸವಾಗಿದ್ದು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಶುಕ್ರವಾರ ಸಂಜೆ ನಿಧನರಾಗಿದ್ದರು.


ಮೃತರು ಪತ್ನಿ, ರತ್ನಮ್ಮ ಪುತ್ರರಾದ ಡಾ ರಾಜಕುಮಾರ್, ಶಿವಪ್ರಸಾದ್, ಸೊಸೆಯಂದಿರು,, ಮೊಮ್ಮಕ್ಕಳು ಸೇರಿದಂತೆ ಹಲವಾರು ಮಂದಿ ಬಂಧು-ಬಳಗವನ್ನು ಅಗಲಿದ್ದು, ಅಂತ್ಯಸಂಸ್ಕಾರವು ಮಾಗಡಿ ತಾಲ್ಲೂಕಿನ ಮುಪ್ಪೇನಹಳ್ಳಿ ಗ್ರಾಮದ ಅವರ ತೋಟದಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑