Tel: 7676775624 | Mail: info@yellowandred.in

Language: EN KAN

    Follow us :


ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ, ಕೇಂದ್ರ ಸರ್ಕಾರದ ರಾಜ್ಯ ಖಾತೆ ಸಚಿವ ಕೃಷ್ಣಪಾಲ್ ಗುರ್ಜರ್

Posted date: 17 Dec, 2023

Powered by:     Yellow and Red

ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಿ, ಕೇಂದ್ರ ಸರ್ಕಾರದ ರಾಜ್ಯ ಖಾತೆ ಸಚಿವ ಕೃಷ್ಣಪಾಲ್ ಗುರ್ಜರ್

ಚನ್ನಪಟ್ಟಣ: ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಯವರ ನೇತೃತ್ವದ ಬಿಜೆಪಿ ಪಕ್ಷದ ಕೇಂದ್ರ ಸರ್ಕಾರವು ಜನಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಿದೆ, ಅದೇ ರೀತಿ

ಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡ ಜನ್ಮದಿನದ ಪ್ರಯುಕ್ತ ಡಿ.15ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದು, ಮೋದಿ ಗ್ಯಾರಂಟಿ ವಾಹನ ಜ.25 ರವರೆಗೆ ದೇಶಾದ್ಯಂತ ಸಂಚರಿಸಲಿದೆ ಎಂದು ಕೇಂದ್ರ ಸರ್ಕಾರದ ಇಂಧನ ಹಾಗೂ ಭಾರಿ ಕೈಗಾರಿಕಾ ರಾಜ್ಯ ಖಾತೆ ಸಚಿವ ಕೃಷ್ಣ ಪಾಲ್ ಗುರ್ಜರ್ ತಿಳಿಸಿದರು.


ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ತಾಲೂಕಿನ ಸುಳ್ಳೇರಿ ಗ್ರಾಮಕ್ಕೆ ಆಗಮಿಸಿದ್ದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳೀಗೆ ಶೇ.100ರಷ್ಟು ತಲುಪಿಸಬೇಕು ಎಂಬ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ, ಪಕ್ಷದ ಪ್ರತಿಯೊಬ್ಬ ಮುಖಂಡರು ಇದರ ಜವಾಬ್ದಾರಿ ಹೊತ್ತು ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.


ಈ ಯಾತ್ರೆ ಪ್ರತಿ ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಲಿದ್ದು, ಅಲ್ಲಿ ಸ್ಟಾಲ್‍ಗಳನ್ನು ಹಾಕಿ ಜನರಿಗೆ ಯೋಜನೆಯ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುವುದು. ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳದ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲೇ ಯೋಜನೆಯನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.


ದೇಶದ ಕಟ್ಟಕಡೆಯ ವ್ಯಕ್ತಿಯನ್ನು ಸಶಕ್ತನಾಗಿ, ಸದೃಢನಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದೆ. ಕೇಂದ್ರ ಸರ್ಕಾರದ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ವಿಕಸಿತ ಭಾರತ ನಿರ್ಮಾಣಕ್ಕೆ ದೇಶದ ಪ್ರತಿ ಪ್ರಜೆಯೂ ತನ್ನ ಕೊಡುಗೆ ನೀಡಲಿ ಎಂಬದು ಅವರ ದ್ಯೆಯೋದ್ದೇಶವಾಗಿದೆ ಎಂದು ವಿವರಿಸಿದರು.


ಕೇಂದ್ರದ ಸರ್ಕಾರದ ಮುದ್ರಾಯೋಜನೆ, ಜನಧನ್ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಪಿಎಂ ಅವಾಸ್, ಕೃಷಿ ಸನ್ಮಾನ್ ಯೋಜನೆ, ಸೋಲಾರ್ ಪಂಪ್, ಜಲಜೀವನ್, ಸ್ವಚ್ಛಭಾರತ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳು ಗ್ರಾಮಗಳಲ್ಲಿನ ಪ್ರತಿಯೊಬ್ಬರಿಗೂ ತಲುಪಿಸಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.


ಈ ಯೋಜನೆಯಲ್ಲಿ ಯಾವುದೇ ಗ್ಯಾರೆಂಟಿ ಇಲ್ಲದೇ ಅರ್ಹರಿಗೆ ಬ್ಯಾಂಕ್ ಲೋನ್ ಸಿಗುವಂಥ ವ್ಯವಸ್ಥೆ ಮಾಡಲಾಗಿದೆ. ವಿಶ್ವಕರ್ಮ ಯೋಜನೆಯ ಮುಖಾಂತರ ವಿಶ್ವಕಮ ಸಮುದಾಯದವರಿಗೆ 3ಲಕ್ಷದವರೆಗೆ ಶ್ಯೂರಿಟಿ ಇಲ್ಲದೇ ಬ್ಯಾಂಕ್ ಲೋನ್ ಕಲ್ಪಿಸುವ ಯೋಜನೆ ರೂಪಿಸಿದ್ದು, ಎಲ್ಲ ಸ್ತರದ ಜನರಿಗೆ ಸರ್ಕಾರದ ಸವಲತ್ತು ತಲುಪಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದರು.


ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ವಿಶ್ವಾಸ ವೃದ್ಧಿಸುತ್ತಿದೆ. 2024ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿಯಾಗಿ ಮೂರನೇ ಬಾರಿ ಮೋದಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಇಂಧನ ಹಾಗೂ ಭಾರಿ ಕೈಗಾರಿಕೆ ರಾಜ್ಯ ಖಾತೆ ಸಚಿವ ಕೃಷ್ಣ ಪಾಲ್ ಗುರ್ಜರ್ ವಿಶ್ವಾಸ ವ್ಯಕ್ತಪಡಿಸಿದರು.


ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಆರ್ಥಿಕವಾಗಿ ಸದೃಢವಾಗಿದ್ದು, ದೇಶವನ್ನು  ಸಾಂಸ್ಕøತಿಕ ನಲೆಗಟ್ಟಿನಲ್ಲೂ ಸಹ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಾಕಷ್ಟ ಶ್ರಮಿಸಿದೆ ಎಂದು ತಿಳಿಸಿದರು. 


ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ಮೇಲಿನ ಜನರ ವಿಶ್ವಾಸ ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿದೆ. ಮೂರನೇ ಬಾರಿ ಸಹ ದೇಶದ ಚುಕ್ಕಾಣಿಯನ್ನು ಭಾರಿ ಬಹುಮತದಿಂದ ಮೋದಿಯವರ ಕೈಗೆ ನೀಡಲು ದೇಶದ ಜನ ನಿರ್ಧರಿಸಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದ್ದು, ರಾಜ್ಯದ ಎಲ್ಲ ಲೋಕಸಭೆ ಕ್ಷೇತ್ರಗಳು ಮೋದಿಯವರ ಜೋಳಿಗೆಗೆ ಬಂದು ಬೀಳಲಿವೆ ಎಂದರು.


ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ, ಎಲ್ಲಿ ಯಾರ ಜತೆ ಮೈತ್ರಿ ಮಾಡಿಕೊಳ್ಳಬೇಕು, ಮಾಡಕೊಳ್ಳಬಾರದು. ಎಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಸ್ಪರ್ಧಿಸಬೇಕು ನಮ್ಮ ಪಕ್ಷದ ಅಭ್ಯರ್ಥಿ ಸ್ಪರ್ಧಿಸಬೇಕು ಎಂಬುದರ ಕುರಿತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ನಿರ್ಧರಿಸಲಿದೆ ಎಂದು ಉತ್ತರಿಸಿದರು.


ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ ಮಾತನಾಡಿ, ಕೇಂದ್ರ ಸರ್ಕಾರದಿಂದ ಜನ ಕಲ್ಯಾಣ ಉದ್ದೇಶದಿಂದ ಸುಮಾರು ೬೯ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಅರ್ಹ ಫಲಾನುಭಾವಿಗಳಿಗೆ ಯೋಜನೆಯನ್ನು ತಲುಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.


ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾತನಾಡಿ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ಕೇಂದ್ರ ಸಚಿವರಾದ ಕೃಷ್ಣ ಪಾಲ್ ಗುರ್ಜರ್ ಅವರಿಗೆ ವಹಿಸಿದೆ. ಮುಂದಿನ ಲೋಕಸಭಾ ಚುನಾವಣೆಯವರೆಗೆ ಅವರು ಉಸ್ತುವಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.


ಬಿಜೆಪಿ ಮುಖಂಡರಾದ ಗೌತಮ್ ಗೌಡ, ಪ್ರಸಾದ್ ಗೌಡ ಇತರರು ಇದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑