ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ/ ಬಿ.ಎಸ್ಸಿ (ಜನರಲ್/ಹೋಮ್ ಸೈನ್ಸ್/ಐಟಿ/ಬಿ.ಸಿ.ಎ/ಬಿ.ಬಿ.ಎ ಹಾಗೂ ಅಂತಿಮ ವರ್ಷದ ಎಂ.ಎ/ಎಂ.ಕಾಂ/ ಎಂ.ಬಿ.ಎ ಮತ್ತು ಎಂ.ಎಸ್ಸಿ ಪದವಿಗಳಿಗೆ ಪ್ರವೇಶಾತಿ ನವೀಕರಣಕ್ಕಾಗಿ ಬೋಧನಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ.
400 ರೂ.ಗಳ ದಂಡಶುಲ್ಕದೊಂದಿಗೆ ಜ. 20ರ ವರೆಗೆ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ವೀಕ್ಷಿಸುವುದು ಹಾಗೂ ಪ್ರಾದೇಶಿಕ ನಿರ್ದೇಶಕರಾದ ಡಾ. ಕೆ. ನಂದಕುಮಾರಿ ದೂ.ಸಂಖ್ಯೆ: 9964495936 ಅಥವಾ ಕಚೇರಿ ದೂ.ಸಂಖ್ಯೆ: 8861732487, 8660460261, 9743184848, 9900356226 ಹಾಗೂ 8618501602 ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು