ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ನಗರದ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿರುವ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ, ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿ, ಜಿಲ್ಲೆಯಲ್ಲಿಯೇ ತನ್ನದೇ ಆದ ಗುಣಮಟ್ಟದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು, ತನ್ನ ವರ್ಚಸ್ಸನ್ನು ವೃದ್ದಿಸಿಕೊಂಡಿರುವ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜನೆ ಮಾಡುವ ಪ್ರತಿಯೊಂದು ಕಾರ್ಯಕ್ರಮಗಳು ಕೂಡ ಅರ್ಥಗರ್ಭಿತದಿಂದ ಕೂಡಿರುತ್ತದೆ ಎಂದರು.
ಶಾಲೆಯ 2ನೇ ತರಗತಿಯ ಉತ್ಸಾಹ ವಿದ್ಯಾರ್ಥಿಗಳು ಒಲಂಪಿಕ್ ಗೇಮ್ ಅನ್ನು ಅಣಿಕಿಸುವಂತೆ, ಕ್ರೀಡಾಪಟುಗಳ ವೇಷವನ್ನು ಧರಿಸಿ, ಒಲಂಪಿಕ್ ಕ್ರೀಡೆಯಂತೆಯೇ ಕ್ರೀಡಾಜ್ಯೋತಿಯ ರಿಲೆ ಯನ್ನು ನಡೆಸುತ್ತಿರುವುದು ಶಾಲಾ ಆಡಳಿತ ಮಂಡಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಮಕ್ಕಳ ಜೊತೆಯಲ್ಲಿ ಆಯಾ ಮಕ್ಕಳ ಪೋಷಕರು ಕೂಡ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡು, ಆವರು ಕೂಡ ವಿವಿಧ ಬಹುಮಾನಗಳನ್ನು ಪಡೆದರು.
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಕವಿತಾಬಾಲಸುಬ್ರಮಣ್ಯಂ, ಶಾಲೆಯ ಪ್ರಾಂಶುಪಾಲರಾದ ಕವಿತಾ, ಆಡಳಿತಾಧಿಕಾರಿ ಮೆಹರ್ ಸುಲ್ತಾನ್, ಮೇಲ್ವಿಚಾರಕರಾದ ಕೌಶಿಕ್ ಭಟ್ಟಾಚಾರ್ಯ ಹಾಗೂ ಹಲವಾರು ಮಂದಿ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು