Tel: 7676775624 | Mail: info@yellowandred.in

Language: EN KAN

    Follow us :


ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

Posted date: 23 Jan, 2024

Powered by:     Yellow and Red

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ ಅಭಿಷೇಕವನ್ನು ಊರಿನ ಮುಖಂಡರು ನೆರವೇರಿಸಿದರು. ಗ್ರಾಮವನ್ನು ಕೇಸರಿ ಬಾವುಟಗಳಿಂದ ಶೃಂಗಾರ ಮಾಡಲಾಗಿತ್ತು. ತಳಿರು ತೋರಣದಿಂದ ಊರು ಕಂಗೊಳಿಸಿತು. ಬೆಳಿಗ್ಗೆಯಿಂದ ಸಂಜೆಯ ತನಕವೂ ಕೂಡ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ಪುರಸ್ಕಾರ ನಡೆಯಿತು. ನಂತರ ಗ್ರಾಮಸ್ಥರು ದೇವರಿಗೆ ವಿಶ ಪೂಜೆಯನ್ನು ಹಮ್ಮಿಕೊಂಡಿದ್ದರು.


ಉಜ್ಜನಹಳ್ಳಿಯ ಯುವ ಮುಖಂಡರು ಹಾಗೂ ಗ್ರಾಮಸ್ಥರು ಒಗ್ಗಟ್ಟಾಗಿ ಸೇರಿ ಅನ್ನಸಂತರ್ಪಣೆಯನ್ನು ನೆರವೇರಿಸಿದರು. ಸುತ್ತಮುತ್ತಲಿನ ಗ್ರಾಮದ ಜನರು ವೀರಾಂಜನೇಯಸ್ವಾಮಿಯ ದರ್ಶನವನ್ನು ಪಡೆದು ಪ್ರಸಾದವನ್ನು ಸ್ವೀಕಾರ ಮಾಡಿದರು. ಗ್ರಾಮದ ಜನರು ಕೂಡ ಈ ಸೇವಾಕಾರ್ಯದಲ್ಲಿ ಭಾಗಿಯಾಗಿದ್ದರು. ರಾಮಮಂದಿರ ಉದ್ಘಾಟನೆಯಾಗಿದ್ದಕ್ಕೆ ಎಲ್ಲರು ಕೂಡ ರಾಮನ ಜಪವನ್ನು ಮಾಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑