ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು 11 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಸಮಿತಿಯವರು ಮತ್ತು ಎಲೆಕೇರಿ ಗ್ರಾಮಸ್ಥರು ತಿಳಿಸಿದ್ದಾರೆ.
ಫೆ. 10 ರ ಶನಿವಾರ ಸಂಜೆ ಸ್ವಸ್ತಿ ವಾಹಕ, ಪುಷ್ಪಾಂಕುರಾರ್ಪಣ, ಮೂರ್ತಿ ಹೋಮ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಪೀಠಪೂಜೆ, ಅಷ್ಪಬಂಧನಾ ಪ್ರತಿಷ್ಠಾಪನೆ ಮುಂತಾದ ಕಾರ್ಯಕ್ರಮಗಳು ಜರುಗಲಿದೆ. ಫೆ.11 ರ ಭಾನುವಾರ ಬೆಳಗ್ಗೆ 10 ರಿಂದ 11:10 ರ ಒಳಗೆ ಸಲ್ಲುವ ಮೇಷ ಲಗ್ನದಲ್ಲಿ ಪುಣ್ಯಾಹವಾಚನ, ಮೂರ್ತಿ ಹೋಮ ಪ್ರಾಣ ಪ್ರತಿಷ್ಟಾಪನಾಹೋಮ, ಅಭಿಷೇಕ, ಪ್ರಾಣ ಪ್ರತಿಷ್ಟಾಪನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮುಂತಾದ ಧಾರ್ಮಿಕ ಸೇವಾ ಕೈಂಕರ್ಯಗಳು ಜರುಗಲಿವೆ. ಮಧ್ಯಾಹ್ನ 12 ಗಂಟೆಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ವಿಶೇಷ ಅಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕರು ಆದ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್, ಎಸ್. ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಎಲೇಕೇರಿ ಗ್ರಾಮಸ್ಥರು ಸೇರಿದಂತೆ, ಅಕ್ಕ ಪಕ್ಕದ ಗ್ರಾಮಸ್ಥರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಅಮ್ಮನವರ ದರ್ಶನ ಪಡೆದು ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥಿಸಿ, ತೀರ್ಥ ಪ್ರಸಾದ ಸ್ವೀಕರಿಸಿ, ಶ್ರೀ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿಯವರು ಹಾಗೂ ಎಲೇಕೇರಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಗೋ ರಾ ಶ್ರೀನಿವಾಸ
ಮೊ – 9845856139
ಪ್ರತಿಕ್ರಿಯೆಗಳು