ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ.
ವೆಂಕಟರಮಣ ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಯಶವಂತಗೌಡ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು.
ಹೀಗಾಗಿ ಚುನಾವಣಾಧಿಕಾರಿಯು ಅವಿರೋಧ ಆಯ್ಕೆ ಪ್ರಕಟಿಸಿದರು. ಫಲಿತಾಂಶ ಪ್ರಕಟಣೆ ನಂತರ ಜೆಡಿಎಸ್ ಕಾರ್ಯಕರ್ತರು, ಯಶವಂತಗೌಡ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
*ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಸಿ; 97 4242 4949*
ಇದೇ ವೇಳೆ ಚನ್ನಪಟ್ಟಣ ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು, ಮುಖಂಡರಾದ ಬೋರ್ ವೆಲ್ ರಾಮಚಂದ್ರ, ಎಂ.ಸಿ.ಎಚ್.ಮೆಹರೀಶ್ ಸೇರಿದಂತೆ ಹಲವಾರು ಮುಖಂಡರು ಯಶವಂತಗೌಡ ಅವರನ್ನು ಅಭಿನಂದಿಸಿದರು.
ಯಶವಂತಗೌಡ ಅವರು ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದರು. ಇವರು ಮತ್ತೀಕೆರೆಯ ಮಾಜಿ ಛೇರ್ಮನ್ ಎಂ.ಹೊನ್ನೇಗೌಡರ ಕುಟುಂಬದ ಕುಡಿ. ಈ ಕುಟುಂಬದಿಂದ ಸ್ಥಳೀಯ ಪಂಚಾಯತಿ ಚುಕ್ಕಾಣಿ ಹಿಡಿದ ನಾಲ್ಕನೆಯವರಾಗಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು